ಸದಾಶಿವ ಅತ್ತಾವರ
ಮಂಗಳೂರು, ಅ.22: ಕೆಐಒಸಿಎಲ್ನ ನಿವೃತ್ತ ಉದ್ಯೋಗಿ ಸದಾಶಿವ ಅತ್ತಾವರ (67) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅತ್ತಾವರದ ಶ್ರೀ ಕೋಟೆದ ಬಬ್ಬುಸ್ವಾಮಿ ದೈವಸ್ಥಾನದ ಗೌರವಾಧ್ಯಕ್ಷರಾಗಿ ಹಾಗೂ ಕುಳೂರು ಪುನ್ನೊಡಿ ಶ್ರೀ ಕೋಟೆದ ಬಬ್ಬುಸ್ವಾಮಿ ದೈವಸ್ಥಾನದ ಗೌರವಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಪುತ್ರನನ್ನು ಅಗಲಿದ್ದಾರೆ.
Next Story