ಕುಂದಾಪುರ, ಜೂ.15: ಕಿರಿಮಂಜೇಶ್ವರ ಗ್ರಾಮದ ಕೊಡೇರಿ ನಿವಾಸಿ ಶುಕ್ರ ಖಾರ್ವಿ ಏಗೈನ್ಮನೆ(60) ಅಲ್ಪಕಾಲದ ಅಸೌಖ್ಯದಿಂದ ಜೂ.14ರಂದು ಕೋಟೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೀನುಗಾರರ ಮುಖಂಡರಾಗಿದ್ದ ಇವರು, ಧಾರ್ಮಿಕ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಮೂವರು ಪುತ್ರಿ ಯರನ್ನು ಅಗಲಿದ್ದಾರೆ.