ಜೆ. ರಾಮಚಂದ್ರ ಭಟ್
ಮಂಗಳೂರು : ಶ್ರೀ ಜೋಡುಮಠ ರಾಮಚಂದ್ರ ಭಟ್ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಜೆ. ಆರ್. ಭಟ್ ಅವರು ವಕೀಲರ ಸಂಘದ ಮಾಜಿ ಅಧ್ಯಕ್ಷರಾಗಿದ್ದರು. ಅವರು ಕಸ್ಟಂ ಇಲಾಖೆಯ ವಿಶೇಷ ಅಭಿಯೋಜಕರೂ ಆಗಿದ್ದರು ಮತ್ತು ಹಲವಾರು ಕಿರಿಯ ವಕೀಲರಿಗೆ ವೃತ್ತಿಯಲ್ಲಿ ಮಾರ್ಗದರ್ಶನ ನೀಡುತ್ತಿದ್ದರು. ಅವರು ಸಿವಿಲ್ ಮತ್ತು ಕ್ರಿಮಿನಲ್ ಎರಡೂ ವಿಭಾಗಗಳಲ್ಲಿ ಪರಿಣಿತಿ ಹೊಂದಿದ್ದರು.
ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಎನ್. ನರಸಿಂಹ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಎಚ್.ವಿ. ರಾಘವೇಂದ್ರ, ಉಪಾಧ್ಯಕ್ಷ ಜಿನೇಂದ್ರ ಕುಮಾರ್ ಹಾಗೂ ಇತರರು ಮೃತರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
Next Story