ಉಡುಪಿ, ನ.19: ಬಾಳಕುಂಬ್ಳಕೆರೆ ಕೃಷ್ಣಾನಂದ ರಾವ್ ಅವರು ಗುರುವಾರ ತಮ್ಮ 82ನೇ ವಯಸ್ಸಿನಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಅವರು ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕೃಷ್ಣಾನಂದ ರಾವ್ ಭಾರತೀಯ ದೂರವಾಣಿ ಇಲಾಖೆಯಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿ ಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.