ಬಾಲಕೃಷ್ಣ ಶೆಟ್ಟಿ ಬಡಾಜೆಗುತ್ತು
ಮಂಗಳೂರು: ಬಂಟ್ವಾಳ ಅಮ್ಟಾಡಿ ಬಡಾಜೆಗುತ್ತು ನಿವಾಸಿ ಬಾಲಕೃಷ್ಣ ಶೆಟ್ಟಿ(101) ಜು.14ರಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಧಾರ್ಮಿಕ ಮುಖಂಡರು, ಪ್ರಗತಿಪರ ಕೃಷಿಕರು, ಕೊಡುಗೈದಾನಿಯಾಗಿದ್ದ ಬಾಲಕೃಷ್ಣ ಶೆಟ್ಟಿಯವರು ಮಂಗ್ಲಿಮಾರ್ ಅಣ್ಣಪ್ಪ ಸ್ವಾಮಿ ದೈವಸ್ಥಾನದ ಗಡಿಕಾರರಾಗಿದ್ದರು. ಹಿರಿಯ ಕಾಂಗ್ರೆಸ್ ಮುಖಂಡರಾಗಿರುವ ಇವರು ಅಮ್ಟಾಡಿ ಪಂಚಾಯಿತಿ ಮಾಜಿ ಅಧ್ಯಕ್ಷ, ಬಂಟ್ವಾಳ ಎಲ್ ಡಿ ಬ್ಯಾಂಕ್ ಸಂಸ್ಥಾಪಕ ನಿರ್ದೇಶಕರಾಗಿದ್ದರು.
ಇವರಿಗೆ ಪುತ್ರ ಮಂಗ್ಲಿಮಾರ್ ಶ್ರೀ ಅಣ್ಣಪ್ಪ ಪಂಜುರ್ಲಿ ಜುಮಾದಿ ಬಂಟ ದೈವಸ್ಥಾನದ ಆಡಳಿತ ಮೊಕ್ತೇಸರ, ಧಾರ್ಮಿಕ ಮುಖಂಡ ಬಡಾಜೆಗುತ್ತು ರವಿಶಂಕರ್ ಶೆಟ್ಟಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.
ಮೃತರ ಅಂತ್ಯಕ್ರಿಯೆ ಜು.15 ಬೆಳಗ್ಗೆ 10.00ಕ್ಕೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
Next Story