ಬಾಬು ಪೂಜಾರಿ
ಮಂಗಳೂರು, ನ.2: ಬಂಟ್ವಾಳ ತಾಲೂಕು ಬಾಳೆಪುಣಿ ಗ್ರಾಮದ ನಾರ್ಯ-ತಚ್ಚಮಜಲು ನಿವಾಸಿ ಬಾಬು ಪೂಜಾರಿ (64)ಯವರು ಮಂಗಳವಾರ ಮಧ್ಯಾಹ್ನ ಅಲ್ಪಕಾಲದ ಅಸೌಖ್ಯ ದಿಂದ ಸ್ವಗೃಹದಲ್ಲಿ ನಿಧನರಾದರು.
ಅವರು ಬಾಳೆಪುಣಿಯ ಅನಂಗ ಗ್ರಾಮದ ಆನಂದ ಯುವಕ ಮಂಡಲದ ಪೂರ್ವ ಸಂಘಟನೆಯ ಸ್ಥಾಪಕರಲ್ಲಿ ಒಬ್ಬರು ಹಾಗೂ ಊರಿನ ಸಾಮಾಜಿಕ ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.
Next Story