Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಚೈನೀಸ್ ಲೋನ್ ಆ್ಯಪ್ ಎಂಬ...

ಚೈನೀಸ್ ಲೋನ್ ಆ್ಯಪ್ ಎಂಬ ಅಂತರ್‌ರಾಷ್ಟ್ರೀಯ ವಂಚನೆಯ ಜಾಲ

ಮುಹಮ್ಮದ್ ರಿಯಾಝ್ಮುಹಮ್ಮದ್ ರಿಯಾಝ್8 Nov 2022 10:03 AM IST
share
ಚೈನೀಸ್ ಲೋನ್ ಆ್ಯಪ್  ಎಂಬ ಅಂತರ್‌ರಾಷ್ಟ್ರೀಯ  ವಂಚನೆಯ ಜಾಲ

ನೀವು ಮೊಬೈಲ್ ಲೋನ್ ಆ್ಯಪ್‌ಗಳಲ್ಲಿ ಸಾಲ ಪಡೆಯುತ್ತಿದ್ದೀರಾ? ಹಾಗಾದರೆ ಹತ್ತು ಬಾರಿ ಯೋಚಿಸಬೇಕು. ನಿಮ್ಮನ್ನು ಬ್ಲಾಕ್‌ಮೇಲ್ ಮಾಡಬಹುದು, ಸಮಾಜದಲ್ಲಿ ನಿಮ್ಮ ಮಾನ ಹರಾಜು ಹಾಕಬಹುದು, ನಿಮ್ಮ ಫೋಟೋಗಳನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುವ ದಮ್ಕಿ ಹಾಕಬಹುದು. ಇದು ವಿಚಿತ್ರವಾದರೂ, ಇಂದು ಹಲವಾರು ಜನರ ಜೀವನದಲ್ಲಿ ನಡೆಯುತ್ತಿರುವ ಕಹಿ ಸತ್ಯವಾಗಿದೆ.

 ಜನರು ಕೋವಿಡ್ - 19 ನಂತರದಲ್ಲಿ ಉದ್ಯೋಗವನ್ನು ಕಳೆದುಕೊಂಡು ಆರ್ಥಿಕವಾಗಿ ಕಂಗೆಟ್ಟಿದ್ದ ಕಾಲ. ಇದರ ಲಾಭ ಪಡೆದು ಮೊಬೈಲ್ ಲೋನ್ ಆ್ಯಪ್‌ಗಳು ನಮ್ಮ ನಡುವೆ ಅದರ ಬೇರುಗಳನ್ನು ಗಟ್ಟಿಗೊಳಿಸಿಕೊಂಡವು. ಹಲವು ಲೋನ್ ಆ್ಯಪ್‌ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟವು. ಇಲ್ಲಿ ನೀವು ಸಾಲವನ್ನು ತೆಗೆಯುತ್ತೀರಾ, ಸಾಲವನ್ನು ಮರುಪಾವತಿ ಕೂಡ ಮಾಡುತ್ತೀರಾ, ಆದರೆ ಅವರು ನಿಮ್ಮಿಂದ ಹೆಚ್ಚಿನ ಹಣವನ್ನು ಕೇಳಲು ಪ್ರಾರಂಭಿಸುತ್ತಾರೆ. ಕೆಲ ತಿಂಗಳ ಹಿಂದೆ ದೇಶದ ವಿವಿಧ ಭಾಗಗಳಲ್ಲಿ ಈ ರೀತಿಯ ಪ್ರಕರಣಗಳು ಬೆಳಕಿಗೆ ಬಂದಿವೆ.

ಮೂರು ತಿಂಗಳ ಹಿಂದೆ ದಿಲ್ಲಿ ಪೊಲೀಸರು 500 ಕೋಟಿ ರೂಪಾಯಿಯನ್ನು ಹವಾಲಾದ ಮೂಲಕ ಚೀನಾಗೆ ಕಳುಹಿಸಿದ ಕಾರಣಕ್ಕೆ 22 ಜನರನ್ನು ಬಂಧಿಸಿದ್ದರು. ಈ ಎಲ್ಲಾ ಸ್ಕಾಮ್‌ನ ಮಾಸ್ಟರ್ ಮೈಂಡ್ ಭಾರತೀಯ ಮೂಲದ ಅನಿಲ್ ಕುಮಾರ್ ಎಂಬ ವ್ಯಕ್ತಿಯಾಗಿದ್ದ. ಈತ ದಂಧೆಯನ್ನು ನಡೆಸಲು ತನ್ನ ಕೈಕೆಳಗೆ 150 ಜನರನ್ನು ನೇಮಕ ಮಾಡಿಕೊಂಡಿದ್ದ. ಚೀನಾದಲ್ಲಿ ಇದ್ದುಕೊಂಡೇ ಈ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದ.ಇದು ಒಂದು ಘಟನೆ ಮಾತ್ರವಲ್ಲದೆ ಕಳೆದ ಕೆಲವು ತಿಂಗಳುಗಳಿಂದ ಈ.ಡಿ. ಮತ್ತು ಪೊಲೀಸರು ಲೋನ್ ಆ್ಯಪ್ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದ ಹಲವರನ್ನು ಬಂಧಿಸಿದ್ದಾರೆ. ಮಾತ್ರವಲ್ಲದೆ ಅವರಿಂದ ಸಾವಿರಾರು ಕೋಟಿ ರೂಪಾಯಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದು ಒಂದು ಸಣ್ಣ ಮಟ್ಟದ ಕಳ್ಳತನದ ಪ್ರಕರಣ ಆಗಿರದೆ, ಅಂತರ್‌ರಾಷ್ಟ್ರೀಯ ಮಟ್ಟದ ವಂಚನೆಯ ಜಾಲ ಎಂದು ಬಹಿರಂಗವಾಗಿದೆ.

ನಿಮ್ಮ ವೈಯಕ್ತಿಕ ಡಾಟಾಗಳು ಲೀಕ್:

ಈ ಆ್ಯಪ್‌ಗಳನ್ನು ನಿಮ್ಮ ಮೊಬೈಲ್ ಫೋನ್‌ಗಳಲ್ಲಿ ಡೌನ್‌ಲೋಡ್ ಮಾಡಿ ಲಾಗಿನ್ ಆಗುವ ಸಂದರ್ಭದಲ್ಲಿ ಮೊಬೈಲ್ ಸಂಖ್ಯೆಯನ್ನು ಹಾಕಬೇಕಾಗುತ್ತದೆ. ಮುಂದಕ್ಕೆ ಈ ಆ್ಯಪ್ ನಿಮ್ಮಲ್ಲಿ ಕಾಂಟ್ಯಾಕ್ಟ್ ಲಿಸ್ಟ್ ಮತ್ತು ಫೋಟೊ ಗ್ಯಾಲರಿಗಳ ಬಳಕೆಗೆ ಪರ್ಮಿಶನ್ ಕೇಳುತ್ತದೆ. ಲೋನ್ ಪಡೆಯುವ ಸಂದರ್ಭದಲ್ಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್ ಮತ್ತು ಬ್ಯಾಂಕ್ ಅಕೌಂಟ್‌ಗಳ ಮಾಹಿತಿ ಹಾಕಬೇಕಾಗುತ್ತದೆ.

ನಂತರ ಕಂಪೆನಿ ನಿಮಗೆ ಸುಲಭವಾಗಿ ಲೋನ್ ನೀಡುತ್ತದೆ. ಆದರೆ ಒಂದು ವಾರದ ನಂತರ ನಿಮಗೆ ಕರೆ ಬರಲು ಪ್ರಾರಂಭವಾಗುತ್ತದೆ. ಲೋನ್ ಹಣದೊಂದಿಗೆ ಹೆಚ್ಚಿನ ಹಣವನ್ನು ನೀಡಲು ನಿರಾಕರಿಸಿದಾಗ ಬ್ಲಾಕ್ ಮೇಲ್ ಮಾಡಲು ಪ್ರಾರಂಭಿಸುತ್ತಾರೆ. ಈ ಕೆಲಸಕ್ಕಾಗಿಯೇ ಕಾಲ್ ಸೆಂಟರ್‌ನಲ್ಲಿ ಜನರನ್ನು ಆಯ್ಕೆ ಮಾಡಲಾಗಿರುತ್ತದೆ.

ನಕಲಿ ಲೋನ್ ಆ್ಯಪ್ ಪತ್ತೆ ಹಚ್ಚುವುದು ಹೇಗೆ?

ಜನರನ್ನು ಲೂಟಿ ಮಾಡಲು ಬೇಕಾಗಿಯೇ ಇಲ್ಲಿ ನಕಲಿ ಕಂಪೆನಿಗಳನ್ನು ಪ್ರಾರಂಭಿಸುತ್ತಾರೆ. ಕಂಪೆನಿಯಲ್ಲಿ ಡಮ್ಮಿ ಡೈರೆಕ್ಟರ್‌ಗಳಿರುತ್ತಾರೆ. ಕಂಪೆನಿಯು ಸೀಲ್, ಡಿಜಿಟಲ್ ಸಿಗ್ನೇಚರ್, ಕಾಲ್ ಸೆಂಟರ್‌ಗಳನ್ನು ಹೊಂದಿರುತ್ತದೆ. ಇದರ ನಡುವೆ ನಕಲಿ ಚೈನೀಸ್ ಲೋನ್ ಆ್ಯಪ್‌ಗಳನ್ನು ಪತ್ತೆ ಹಚ್ಚಬೇಕಾಗುತ್ತದೆ. ದೇಶದಲ್ಲಿರುವ ಪ್ರತಿಯೊಂದು ಡಿಜಿಟಲ್ ಲೋನ್ ಆ್ಯಪ್‌ಗಳು ಆರ್‌ಬಿಐಯ ಜೊತೆ ಕಡ್ಡಾಯವಾಗಿ ರಿಜಿಸ್ಟರ್ ಆಗಿರಬೇಕಾಗುತ್ತದೆ.

ನೀವು ಲೋನ್ ತೆಗೆಯ ಬಯಸುವ ಕಂಪೆನಿಯನ್ನು ಆರ್‌ಬಿಐ ವೆಬ್‌ಸೈಟ್‌ಗೆ ಹೋಗಿ ರಿಜಿಸ್ಟರ್ ಆಗಿದೆಯೇ? ಅಥವಾ ಇಲ್ಲವೇ? ಎಂಬುದಾಗಿ ಪರಿಶೀಲಿಸಬೇಕಾಗುತ್ತದೆ. ಇದರಿಂದ ವಂಚನೆಗೆ ಒಳಗಾಗುವುದನ್ನು ತಪ್ಪಿಸಬಹುದಾಗಿದೆ. ಇಂದು ಗೂಗಲ್ ಪ್ಲೇ ಸ್ಟೋರ್ ಗಳಲ್ಲಿ ಇಂತಹ ಹಲವು ಚೈನೀಸ್ ಆ್ಯಪ್‌ಗಳನ್ನು ಕಾಣಬಹುದಾಗಿದೆ. ಇದರ ಮೂಲಕ ಸಾವಿರಾರು ಕೋಟಿ ರೂಪಾಯಿಗಳು ಭಾರತದಿಂದ ಇತರ ದೇಶಗಳಿಗೆ ಹವಾಲಾದ ಮೂಲಕ ಹೋಗುತ್ತಿದೆ. ಇದು ಕೇವಲ ಜನರ ಮೇಲೆ ಮಾತ್ರವಲ್ಲದೆ, ದೇಶದ ಆರ್ಥಿಕತೆಯ ಮೇಲೂ ಕೆಟ್ಟ ಪರಿಣಾಮವನ್ನು ಬೀರುತ್ತಿದೆ. ಈ ವಂಚನೆಯು ಸಾವಿರಾರು ಜನರ ಜೀವನವನ್ನು ಛಿದ್ರಗೊಳಿಸುತ್ತಿದ್ದು, ಸರಕಾರ, ಆರ್‌ಬಿಐ ಇಂತಹ ಆ್ಯಪ್‌ಗಳ ಮೇಲೆ ನಿಗಾ ಇಡಬೇಕಿದೆ ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕಾಗಿದೆ.

share
ಮುಹಮ್ಮದ್ ರಿಯಾಝ್
ಮುಹಮ್ಮದ್ ರಿಯಾಝ್
Next Story
X