ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿಯಿಕ್ಕಿದ ಗುಂಪು
ಲಕ್ನೋ, ಆ.24: ಸಹರನ್ಪುರ ಜಿಲ್ಲೆಯ ರಾಮಪುರ್ ಮಣಿಹರನ್ ಪ್ರದೇಶದಲ್ಲಿ ಮಂಗಳವಾರ ಗುಂಪೊಂದು ಗೋಮಾಂಸ ಸಾಗಿಸಲಾಗುತ್ತಿತ್ತು ಎಂದು ಹೇಳಲಾದ ವಾಹನವೊಂದಕ್ಕೆ ಬೆಂಕಿ ಹಚ್ಚಿದ ಘಟನೆ ನಡೆದಿದೆ.
ಪಿಕ್ಅಪ್ ವಾಹನವನ್ನು ತಡೆದು ಬೆಂಕಿ ಹಚ್ಚಿದ ತಂಡ ನಂತರ ಸ್ಥಳದಲ್ಲಿ ದಾಂಧಲೆ ನಡೆಸಿತೆಂದು ಎಸ್ಪಿಸಂಜಯ್ ಸಿಂಗ್ ಹೇಳಿದ್ದಾರೆ. ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಬೇಕಾಯಿತೆಂದು ಅವರು ವಿವರಿಸಿದ್ದಾರೆ.
ಅಕ್ರಮ ಗೋಮಾಂಸ ಸಾಗಾಟ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Next Story