ಉರಿ ಭಯೋತ್ಪಾದಕ ದಾಳಿ ಶೋಚನೀಯ ಅಪಮಾನ: ಸೋನಿಯಾ
ಹೊಸದಿಲ್ಲಿ, ಸೆ.18: ಉರಿಯಲ್ಲಿ ನಡೆದಿರುವ ಭಯೋತ್ಪಾದಕ ದಾಳಿ ರಾಷ್ಟ್ರೀಯ ಪ್ರಜ್ಞೆಯ ಮೇಲಿನ ಶೋಚನೀಯ ಅಪಮಾನವಾಗಿದೆಯೆಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ವ್ಯಾಖ್ಯಾನಿಸಿದ್ದಾರೆ. ಈ ದಾಳಿಯ ಪಿತೂರಿಗಾರರನ್ನು ಕಟಕಟೆಗೆಳೆಯಲಾಗುವುದೆಂಬ ಆಶಾವಾದವನ್ನು ಅವರು ವ್ಯಕ್ತಪಡಿಸಿದ್ದಾರೆ.
ದಾಳಿಯಲ್ಲಿ 17 ಸೈನಿಕರು ಸಾವಿಗೀಡಾಗಿರುವುದಕ್ಕೆ ಸೋನಿಯಾ ದುಃಖ ವ್ಯಕ್ತಪಡಿಸಿದ್ದಾರೆ.
ಉರಿಯಲ್ಲಿ ನಡೆದ ಭೀಕರ ದಾಳಿಯಲ್ಲಿ ಭಾರತೀಯ ಸೈನಿಕರು ಹುತಾತ್ಮರಾಗಿರುವ ಬಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಘಾತ ಹಾಗೂ ತೀವ್ರ ದುಃಖವನ್ನು ವ್ಯಕ್ತಪಡಿಸಿದ್ದಾರೆಂದು ಪಕ್ಷದ ಹೇಳಿಕೆಯೊಂದು ತಿಳಿಸಿದೆ.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಹ ದಾಳಿಯನ್ನು ಖಂಡಿಸಿದ್ದಾರೆ. ದಾಳಿಯಲ್ಲಿ ಹುತಾತ್ಮರಾಗಿರುವ ವೀರ ಯೋಧರ ಕುಟುಂಬಗಳಿಗೆ ಅವರು ಹೃತ್ಪೂರ್ವಕ ಸಂತಾಪ ಸೂಚಿಸಿದ್ದಾರೆ.
Next Story