ಅ.21ಕ್ಕೆ ಮುಂಬೈನಲ್ಲಿ ಮಹತ್ವದ ಸಭೆ: ಸಿಎಂ ಸಿದ್ಧರಾಮಯ್ಯಗೆ ಆಹ್ವಾನ
ಮಹಾದಾಯಿ ನದಿ ನೀರು ಹಂಚಿಕೆ ವಿವಾದ
ಮುಂಬೈ, ಅ.6: ಮಹಾದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಬಯಸಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅ.21 ರಂದು ಮುಂಬೈನಲ್ಲಿ ಸಭೆ ನಡೆಸಲು ನಿರ್ಧರಿಸಿದ್ದಾರೆ.
ಗೋವಾ ಹಾಗೂ ಕರ್ನಾಟಕದ ಮುಖ್ಯಮಂತ್ರಿಗಳಾದ ಲಕ್ಷ್ಮೀಕಾಂತ್ ಪರ್ಸೆಕರ್ ಹಾಗೂ ಸಿದ್ಧರಾಮಯ್ಯಗೆ ಪತ್ರ ಬರೆದಿರುವ ಫಡ್ನವಿಸ್ ಸಭೆಗೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ.
ಸಿಎಂ ಸಿದ್ಧರಾಮಯ್ಯ ಮುಂಬೈನಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸುವುದಾಗಿ ಫಡ್ನವಿಸ್ಗೆ ತಿಳಿಸಿದ್ದಾರೆ.
Next Story