-

ಭಾರತೀಯ ವೈದ್ಯ ವಿಜ್ಞಾನ ಸಂಶೋಧನಾ ಸಂಸ್ಥೆ(ICMR)ಗೆ ಪತ್ರ ಬರೆದ ಹಿರಿಯ ಪತ್ರಕರ್ತ

30-55 ಪ್ರಾಯವರ್ಗದಲ್ಲಿ ಹೃದಯಾಘಾತದ ಪ್ರಮಾಣ ತೀವ್ರ ಹೆಚ್ಚಳ: ಸಕಾಲಿಕ ಕ್ರಮಕ್ಕೆ ರಾಜಾರಾಂ ತಲ್ಲೂರು ಆಗ್ರಹ

-

ಉಡುಪಿ: ನಾಡಿನೆಲ್ಲೆಡೆ 30-55 ಪ್ರಾಯವರ್ಗದಲ್ಲಿ ಹೃದಯಾಘಾತದ ಪ್ರಮಾಣ ಒಂದೇ ಸಮನೆ ಹೆಚ್ಚುತ್ತಿದೆ. ಇದೊಂದು ಅಪಾಯಕಾರಿ ಬೆಳವಣಿಗೆಯಾಗಿದೆ. ಈ ನಿಟ್ಟಿನಲ್ಲಿ ಸರಕಾರದ-ಆರೋಗ್ಯಾಡಳಿತದ ಕಡೆಯಿಂದ ಯಾವುದೇ ಗಂಭೀರ ಪ್ರಯತ್ನಗಳು ನಡೆಯುತ್ತಿಲ್ಲ. ಆದ್ದರಿಂದ ಭಾರತೀಯ ವೈದ್ಯ ವಿಜ್ಞಾನ ಸಂಶೋಧನಾ ಸಂಸ್ಥೆ (ICMR) ಈ ವಿಚಾರದಲ್ಲಿ ಆಳವಾಗಿ ಅಧ್ಯಯನ/ಸಂಶೋಧನೆ ನಡೆಸಿ, ಇದಕ್ಕೆ ಕಾರಣವನ್ನು ಪತ್ತೆ ಹಚ್ಚಬೇಕು ಹಾಗೂ ಜೀವನಷ್ಟವನ್ನು ತಡೆಯಲು ಸಕಾಲಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಒತ್ತಾಯಿಸಿದ್ದಾರೆ.

 ಈ ಕುರಿತು ಆರೋಗ್ಯ ಸಂಶೋಧನಾ ಇಲಾಖೆಯ ಕಾರ್ಯದರ್ಶಿ ಹಾಗೂ ICMR ಮಹಾನಿರ್ದೇಶಕ ರಾಜೇಶ್ ಭೂಷಣ್ ಅವರಿಗೆ ಪತ್ರ ಬರೆದಿರುವ ರಾಜಾರಾಂ ತಲ್ಲೂರು, ಕಳೆದ ಎರಡೂವರೆ ವರ್ಷಗಳಲ್ಲಿ ಕೋವಿಡ್-19 ಮಹಾಮಾರಿಯ ಅವಧಿಯಲ್ಲಿ, ಕೋವಿಡ್ ಕಾರಣಕ್ಕಾಗಿ ಸಂಭವಿಸಿದ ಜೀವನಷ್ಟಗಳ ಜೊತೆ ಜೊತೆಗೇ ದೊಡ್ಡ ಪ್ರಮಾಣದಲ್ಲಿ ಹೃದಯಾಘಾತದ ಕಾರಣಕ್ಕೆ (MI) ಸಾವುಗಳು ಸಂಭವಿಸಿವೆ. ಈಗ ಕೋವಿಡ್ ತೀವ್ರತೆ ಕಡಿಮೆ ಆದ ಬಳಿಕವೂ ಈ ಸಾವಿನ ಸರಣಿ ಮುಂದುವರಿದಿದ್ದು, ದೇಶದೊಳಗೆ ದೊಡ್ಡ ಸಂಖ್ಯೆಯಲ್ಲಿ ಜನರು ಹೃದಯಾಘಾತಕ್ಕೆ ಬಲಿ ಆಗುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ, 30-55ರ ಉತ್ಪಾದಕ ಪ್ರಾಯ ವರ್ಗದಲ್ಲೇ ಈ ರೀತಿಯ ಸಾವುಗಳು ದೊಡ್ಡ ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿವೆ. ವಿಶೇಷವಾಗಿ ಕರಾವಳಿ ಕರ್ನಾಟಕದಲ್ಲಿ ಈ ವಿಲಕ್ಷಣವಾದ ಬೆಳವಣಿಗೆ ಹೆಚ್ಚಾಗಿ ಕಂಡುಬಂದಿದೆ. ಕಳೆದ ಒಂದು ವಾರದಲ್ಲೇ ಈ ಪ್ರದೇಶದ ಪತ್ರಿಕೆಗಳಲ್ಲಿ ಕನಿಷ್ಠ 5-6 ಇಂತಹ ಸಾವಿನ ವರದಿಗಳು ಪ್ರಕಟವಾಗಿವೆ. ದೇಶಾದ್ಯಂತವೂ ಇದೇ ಪರಿಸ್ಥಿತಿ ಇದೆ ಎಂಬುದು ತನ್ನ ಅಭಿಪ್ರಾಯ. ಹೀಗೆ ಅನಿರೀಕ್ಷಿತವಾಗಿ ನಿಧನ ಹೊಂದಿದವರೆಲ್ಲರೂ ಎಳೆಯರು ಮತ್ತು ಆರೋಗ್ಯವಂತರಾಗಿ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದವರು. ಇದೊಂದು ಅಪಾಯಕಾರಿ ಬೆಳವಣಿಗೆಯಾಗಿದ್ದು, ICMRನಂತಹ  ಸುಸಜ್ಜಿತ ಸಂಶೋಧನಾ ಸಂಸ್ಥೆ ಈ ವಿಚಾರದಲ್ಲಿ ಆಳವಾಗಿ ಅಧ್ಯಯನ/ಸಂಶೋಧನೆ ನಡೆಸಿ, ಇದಕ್ಕೆ ಕಾರಣವನ್ನು ಪತ್ತೆ ಹಚ್ಚಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಠ, ದೇವಸ್ಥಾನ, ಟ್ರಸ್ಟ್ ಗಳಿಗೆ 142 ಕೋಟಿ ರೂ. ಮಂಜೂರು

ಜನಸಾಮಾನ್ಯರಲ್ಲಿ ಈ ರೀತಿಯ ಹಠಾತ್ ಸಾವಿನ ಬಗ್ಗೆ ಹಲವು ಅಪನಂಬಿಕೆಗಳು ತಲೆಯೆತ್ತಿವೆ. ಈ ರೀತಿಯ ಸಾವುಗಳಿಗೆ ಕೋವಿಡೋತ್ತರ ದೀರ್ಘಕಾಲಿಕ ಪರಿಣಾಮಗಳು ಅಥವಾ ಕೋವಿಡ್ ಲಸಿಕೆ ಅಥವಾ ಮಾನಸಿಕ ಒತ್ತಡ/ಜೀವನ ಶೈಲಿ ಕಾರಣ ಆಗಿರಬಹುದೆಂಬ ಸಂಶಯಗಳು ಜನಮನದಲ್ಲಿ ಬೆಳೆಯುತ್ತಿವೆ. ಈ ಮರಣದ ಆಘಾತಗಳು ಅದಕ್ಕೆ ತುತ್ತಾದವರ ಕುಟುಂಬಗಳಲ್ಲಿ ಸಾಮಾಜಿಕ, ಆರ್ಥಿಕ ಸಂಕಟಗಳಿಗೆ ಕಾರಣವಾಗುತ್ತಿವೆ. ಯಾಕೆಂದರೆ, ಹೀಗೆ ಮೃತಪಟ್ಟಿರುವ ಹೆಚ್ಚಿನವರು ತಮ್ಮ ಕುಟುಂಬಗಳ ವರಮಾನದ ಆಧಾರಸ್ಥಂಭಗಳಾಗಿದ್ದವರು. ಇಂತಹ ಪ್ರಕರಣಗಳು ಹೆಚ್ಚಾದಲ್ಲಿ ಇದು ಸಾಮಾಜಿಕವಾಗಿ-ಆರ್ಥಿಕವಾಗಿ ಕ್ಷೋಭೆಗೆ ಕಾರಣವಾದರೂ ಅಚ್ಚರಿ ಇಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಆದ್ದರಿಂದ ICMR, ಈ ನಿಟ್ಟಿನಲ್ಲಿ ತಕ್ಷಣ ಕಾರ್ಯಾರಂಭಿಸಬೇಕು ಮತ್ತು ಈ ರೀತಿಯ ಸಾವುಗಳ ಮಾಹಿತಿಗಳನ್ನು ಸಂಗ್ರಹಿಸಿ, ಅದಕ್ಕೆ ಕಾರಣಗಳ ವಿಶ್ಲೇಷಣೆ ನಡೆಸಬೇಕು ಮತ್ತು ಅಂತಹ ಜೀವನಷ್ಟವನ್ನು ತಡೆಯಲು ಸಕಾಲಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಲ್ಲೂರು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಈ ಕುರಿತ ಅವರ ಫೇಸ್ ಬುಕ್ ಪೋಸ್ಟ್ ಇಲ್ಲಿದೆ:

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

ಇಂದು ಹೆಚ್ಚು ಓದಿದ್ದು


Back to Top