Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಕೇಂದ್ರ ಸರಕಾರದ ಖಾಸಗೀಕರಣ...

ಉಡುಪಿ: ಕೇಂದ್ರ ಸರಕಾರದ ಖಾಸಗೀಕರಣ ವಿರುದ್ಧ ಅಂಚೆ ನೌಕರರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ28 March 2022 8:23 PM IST
share
ಉಡುಪಿ: ಕೇಂದ್ರ ಸರಕಾರದ ಖಾಸಗೀಕರಣ ವಿರುದ್ಧ ಅಂಚೆ ನೌಕರರ ಆಕ್ರೋಶ

ಉಡುಪಿ : ಅಂಚೆ ಇಲಾಖೆಯಲ್ಲಿ ಖಾತೆ ತೆರೆಯುವ ಕುರಿತು ಅವೈಜ್ಞಾನಿಕ ಗುರಿಯನ್ನು ನೀಡಲಾಗುತ್ತಿದೆ. ಈ ಮೂಲಕ ನೌಕರರ ಮೇಲೆ ಬ್ರಿಟೀಷರ ರೀತಿಯ ದಬ್ಬಾಳಿಕೆ, ದೌರ್ಜನ್ಯ ನಡೆಸಲಾಗುತ್ತಿದೆ. ಇಲ್ಲಿ ಈಗಲೂ   ಬ್ರೀಟಿಷ್ ರೂಲ್ ನಡೆಯುತ್ತಿದೆ ಎಂದು ಪೋಸ್ಟಲ್ ಜಾಯಿಂಟ್ ಕೌನ್ಸಿಲ್ ಆಫ್ ಆಕ್ಷನ್ ಇದರ ಉಡುಪಿ ವಿಭಾಗದ ಅಧ್ಯಕ್ಷ ಅಂಚೆ ನೌಕರರ ಸಂಘಟನೆ ಗಳ ಜಂಟಿ ಕ್ರಿಯಾ ಸಮಿತಿಯ ಉಡುಪಿ ವಿಭಾಗದ ಅಧ್ಯಕ್ಷ ಪ್ರವೀಣ್ ಜತ್ತನ್ನ ಆರೋಪಿಸಿದ್ದಾರೆ.

ಎರಡು ದಿನಗಳ ರಾಷ್ಟ್ರ ವ್ಯಾಪಿ ಮುಷ್ಕರದ ಪ್ರಯುಕ್ತ ಅಂಚೆ ನೌಕರರ ಸಂಘಟನೆ ಗಳ ಜಂಟಿ ಕ್ರಿಯಾ ಸಮಿತಿಯ ಉಡುಪಿ ವಿಭಾಗದ ನೇತೃತ್ವದಲ್ಲಿ ಉಡುಪಿ ಮುಖ್ಯ ಅಂಚೆ ಕಚೇರಿ ಎದುರು ಸೋಮವಾರ ನಡೆದ ಧರಣಿಯನ್ನು ದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಈ ಮುಷ್ಕರದ ಮೂಲಕ ಇಲಾಖೆಯಿಂದ 23 ಬೇಡಿಕೆಗಳನ್ನು ಸರಕಾರದ ಮುಂದಿರಸಲಾಗಿದೆ. ಇದೆಲ್ಲ ಸಿಗಬೇಕಾದರೆ ಮೊದಲು ಖಾಸಗೀಕರಣ ಆಗು ವುದನ್ನು ತಡೆಯಬೇಕಾಗಿದೆ. ಕೇಂದ್ರ ಸರಕಾರ ೧೫೮ ವರ್ಷ ಇತಿಹಾಸವುಳ್ಳ ಇಲಾಖೆಯನ್ನು ಖಾಸಗೀಕರಣ ಮಾಡಲು ಹೊರಟಿದೆ. ಅಂಚೆ ಇಲಾಖೆಯಿಂದ ಯಾವುದೇ ಲಾಭ ಇಲ್ಲ ಎಂಬುದು ಸರಕಾರದ ವಾದ ಎಂದರು.

ದೇಶದಲ್ಲಿ 1.55 ಲಕ್ಷ ಅಂಚೆ ಕಚೇರಿ ಇರುವ ದೊಡ್ಡ ಇಲಾಖೆ ಇದಾಗಿದ್ದು, ಇದನ್ನು ಬಳಸಿಕೊಂಡು ಆದಾಯ ಗಳಿಸುವ ಬಗ್ಗೆ ಸರಕಾರ ಯೋಚುನೆ ಮಾಡಬೇಕು. ಈ ಕಾಲದಲ್ಲೂ ಅತ್ಯಂತ ಕಡಿಮೆ ದರದಲ್ಲಿ ಸೇವೆ ನೀಡುವಾಗ ಆದಾಯ ಬರಲು ಹೇಗೆ ಸಾಧ್ಯ. ಆದುದರಿಂದ ಇಲಾಖೆಯ ಅಕೌಂಟಿಂಗ್ ವ್ಯವಸ್ಥೆ ಬದಲಾವಣೆ ಮಾಡಬೇಕು. ಇಲಾಖೆಯನ್ನು ಖಾಸಗೀರಣ ಮಾಡಿದರೆ ಸರಕಾರದಿಂದ ಸಿಗುತ್ತಿದ್ದ ಸೇವೆ ಖಾಸಗಿಯಲ್ಲಿ ಸಿಗಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.

ಧರಣಿಯಲ್ಲಿ ಸಮಿತಿಯ ಸಂಚಾಲಕ ಸುಹಾಸ್, ಸಹಸಂಚಾಲಕ ಸುರೇಶ್ ಕೆ., ಮುಖಂಡರಾದ ವಿಜಯ ನಾರಿ, ರತ್ನಾಕರ್ ನಾರಿ ವಂಡಾರು, ಸಿ.ಕೆ. ನಾರಾಯಣ್ ಮೊದಲಾದವರು ಉಪಸ್ಥಿತರಿದ್ದರು.

ಗಮನ ಸೆಳೆದ ‘ಗೋಮುಖವ್ಯಾಘ್ರ’!

ಅಂಚೆ ಇಲಾಖೆಗೆ ತಟ್ಟಿರುವ ಖಾಸಗೀಕರಣದ ಭೂತದ ವಿರುದ್ಧ ಉಡುಪಿ ಅಂಚೆ ಕಚೇರಿಯ ಪೋಸ್ಟ್‌ಮೆನ್ ರಾಘವೇಂದ್ರ ಪ್ರಭು, ಗೋಮುಖವ್ಯಾಘ್ರ ವೇಷ ಧರಿಸಿ ಧರಣಿಯಲ್ಲಿ ಎಲ್ಲರ ಗಮನ ಸೆಳೆದರು.

‘ಇಂದು ಸರಕಾರಿ ಇಲಾಖೆಯನ್ನು ಖಾಸಗಿ ಸಂಸ್ಥೆಗಳು ಆಕ್ರಮಣ ಮಾಡು ತ್ತಿದೆ. ಗೋವಿನ ಮುಖವಾಡ ಹಾಕಿಕೊಂಡು ಬರುವ ಈ ಖಾಸಗಿ ಸಂಸ್ಥೆಗಳು ನಿಜವಾಗಿ ಹುಲಿಯಾಗಿರುತ್ತದೆ. ಇವರು ಎಂದಿಗೂ ಸಾಮಾನ್ಯ ನಾಗರಿಕರ, ನೌಕರರ ಹಾಗೂ ಗ್ರಾಹಕರ ಪರವಾಗಿ ಇರುವುದಿಲ್ಲ. ಅವರಿಗೆ ಲಾಭ ಮಾತ್ರ ಮುಖ್ಯವಾಗಿರುತ್ತದೆ. ಆದುದರಿಂದ ಈ ಖಾಸಗೀಕರಣ ನಮಗೆ ಬೇಡ ಸಂದೇಶ ಸಾರಲು ಈ ವೇಷ ಹಾಕಿದ್ದೇನೆ’ ಎಂದು ರಾಘವೇಂದ್ರ ಪ್ರಭು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X