ಶನಿವಾರ ಡಿಕೆಶಿ ಉಡುಪಿಗೆ
ಉಡುಪಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮೇ 21ರ ಶನಿವಾರ ಉಡುಪಿಗೆ ಆಗಮಿಸಲಿದ್ದಾರೆ. ಡಿಕೆಶಿ ಅವರು ಅಂದು ಬೆಳಗ್ಗೆ 8.30ಕ್ಕೆ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಹಮ್ಮಿಕೊಂಡಿರುವ ದಿ.ರಾಜೀವಗಾಂಧಿ ಅವರ 31ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story