ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಶಂಕರನಾರಾಯಣ : ಅನಾರೋಗ್ಯದಿಂದ ಬಳಲುತ್ತಿದ್ದ ಎಂಬವರು ಹಿಲಿಯಾಣ ಗ್ರಾಮದ ಚದ್ರಳಕೊಡ್ಲು ನಿವಾಸಿ ಬಾಬು ನಾಯ್ಕ(೬೨) ಎಂಬವರು ಮಾನಸಿಕ ಖಿನ್ನತೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜೂ.೭ರಂದು ಬೆಳಗಿನ ಜಾವ ಮನೆ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ವೈಯಕ್ತಿಕ ಕಾರಣದಿಂದ ಮನನೊಂದ ಮೂಲತಃ ಯಲ್ಲಾ ಪುರದ ಸರೋಜ (೩೬) ಎಂಬವರು ಜೂ.೬ರಂದು ತಾನು ವಾಸ್ತವ್ಯವಿದ್ದ ಖಾರ್ವಿಕೇರಿಯ ಬಾಡಿಗೆ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story