ಉಡುಪಿಯ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ
ಉಡುಪಿ : ರಾಜ್ಯದ ವಿವಿಧ ಭಾಗಗಳಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಉಡುಪಿ ಜಿಲ್ಲೆಯ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪ ವಿಭಾಗದ ಇಲಾಖೆ ಸಹಾಯಕ ಅಭಿಯಂತರರು, ಹರೀಶ್ ಇವರ ಮನೆ ಹಾಗೂ ಕಚೇರಿ ಮೇಲೆ ಇಂದು ಬೆಳಗ್ಗೆ ಉಡುಪಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಉಡುಪಿಯ ಕೊರಂಗ್ರಪಾಡಿಯಲ್ಲಿರವ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪ ವಿಭಾಗದ ಇಲಾಖೆ ಸಹಾಯಕ ಅಭಿಯಂತರರು, ಹರೀಶ್ ಅವರ ಮನೆಯ ಮೇಲೆ ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ದಾಳಿಯ ವೇಳೆ ಇನ್ಸ್ ಪೆಕ್ಟರ್ ಗಳಾದ ಸತೀಶ್.ಜಿ.ಜೆ, ರಫಿಕ್ ಎಂ, ಸಿಬ್ಬಂದಿ ಯತಿನ್ ಕುಮಾರ್, ಪ್ರಸನ್ನ ದೇವಾಡಿಗ, ರವೀಂದ್ರ ಗಾಣಿಗ, ಅಬ್ದುಲ್ ಜಲಾಲ್, ಅಬ್ದುಲ್ ಲತೀಫ್, ರಾಘವೇಂದ್ರ ಹೊಸಕೋಟೆ, ಸೂರಜ್ ಕಾಪು, ರಮೇಶ್ ಭಂಡಾರಿ ಹಾಗೂ ಪ್ರತಿಮಾ ಉಪಸ್ಥಿತರಿದ್ದರು.
Next Story