ಜು.3ರಂದು ದಸಂಸ ಪ್ರತಿಭಟನೆ
ಉಡುಪಿ : ವಿವಾದಿತ ಪಠ್ಯವನ್ನು ಶಾಲೆಗಳಿಗೆ ಪೂರೈಕೆ ಮಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಮತ್ತು ರೋಹಿತ್ ಚಕ್ರತೀರ್ಥರನ್ನು ಕೂಡಲೇ ಎಸ್ಸಿಎಸ್ಟಿ ದೌರ್ಜನ್ಯ ತಡೆ ಕಾಯಿದೆಯನ್ವ ಕೇಸು ದಾಖಲಿಸಿ ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಶಾಖೆ ವತಿಯಿಂದ ಜು.೩ರಂದು ಬೆಳಗ್ಗೆ ೧೦.೩೦ಕ್ಕೆ ಉಡುಪಿಯ ಹುತಾತ್ಮ ಸ್ಮಾರಕದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ ಮಾಸ್ತರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story