ಹೆಬ್ರಿ: ಶಿವಪುರದಲ್ಲಿ ಮನೆ ಸಂಪೂರ್ಣ ಹಾನಿ
ಉಡುಪಿ : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯಲ್ಲಿ ಐದು ಮನೆಗಳಿಗೆ ಹಾನಿಯಾಗಿದ್ದು ಎರಡೂವರೆ ಲಕ್ಷ ರೂ.ಗಳಿಗೂ ಅಧಿಕ ನಷ್ಟ ಸಂಭವಿಸಿದೆ.
ಹೆಬ್ರಿ ತಾಲೂಕು ಶಿವಪುರದಲ್ಲಿ ಜಗದೀಶ್ ಶೆಟ್ಟಿ ಎಂಬವರ ವಾಸ್ತವ್ಯದ ಪಕ್ಕಾ ಮನೆ ಗಾಳಿ-ಮಳೆಯಿಂದ ಭಾಗಶ: ಹಾನಿಗೊಂಡಿದ್ದು ಒಂದು ಲಕ್ಷ ರೂ.ಗಳಿಗೂ ಅಧಿಕ ನಷ್ಟ ಸಂಭವಿಸಿದೆ. ಕಾಪು ತಾಲೂಕು ಕುರ್ಕಾಲು ಗ್ರಾಮದ ಅರುಣ ಎಂಬವರ ಮನೆಯ ಜಾನುವಾರು ಕೊಟ್ಟಿಗೆ ಹಾಗೂ ಶೌಚಾಲಯ ಗಾಳಿಯಿಂದ ಹಾನಿಗೊಂಡಿದ್ದು ೫೦ ಸಾವಿರ ರೂ.ನಷ್ಟು ನಷ್ಟದ ಅಂದಾಜು ಮಾಡಲಾಗಿದೆ.
ಕಾಪು ತಾಲೂಕು ಏಣಗುಡ್ಡೆ ಗ್ರಾಮದ ಶೇಖರ ಅಮೀನ್ ಎಂಬವರ ಮನೆಯ ಶೌಚಾಲಯಕ್ಕೆ ಹಾನಿಯಾಗಿದ್ದು ೫೦ ಸಾವಿರ ರೂ.ನಷ್ಟವಾಗಿದೆ. ಕುರ್ಕಾಲು ಗ್ರಾಮಟದ ವಸಂತಿ ಎಂಬವರ ಮನೆ ಮೇಲೆ ಮರ ಬಿದ್ದು ಭಾಗಶ: ಹಾನಿಯಾಗಿದ್ದು ೪೫,೦೦೦ ನಷ್ಟದ ಅಂದಾಜುಮಾಡಲಾಗಿದೆ.
ಬ್ರಹ್ಮಾವರ ತಾಲೂಕು ಕುಮ್ರಗೋಡು ಗ್ರಾಮದ ಕುಮಾರ ಗಾಣಿಗ ಎಂಬವರ ವಾಸದ ಮನೆಯ ಮೇಲೆ ಮರ ಬಿದ್ದು ಭಾಗಶ: ಹಾನಿಯಾಗಿದೆ.
Next Story