Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಭೂಕುಸಿತ; ಅಮೃತ ವಿವಿಯಿಂದ ಕೊಡಗು,...

ಭೂಕುಸಿತ; ಅಮೃತ ವಿವಿಯಿಂದ ಕೊಡಗು, ಕರಾವಳಿಯಲ್ಲಿ ಅಧ್ಯಯನ: ಸಿಎಂ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ13 July 2022 9:09 PM IST
share
ಭೂಕುಸಿತ; ಅಮೃತ ವಿವಿಯಿಂದ ಕೊಡಗು, ಕರಾವಳಿಯಲ್ಲಿ ಅಧ್ಯಯನ: ಸಿಎಂ ಬೊಮ್ಮಾಯಿ

ಉಡುಪಿ : ಕೊಡಗು ಮತ್ತು ಕರಾವಳಿ ಜಿಲ್ಲೆಗಳ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಇತ್ತೀಚೆಗೆ ಭೂಕುಸಿತ ಹೆಚ್ಚೆಚ್ಚು ಸಂಭವಿಸುತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ತಜ್ಞರಿರುವ ಅಮೃತ ವಿವಿ ಈಗಾಗಲೇ ಕೊಡಗು ಭಾಗದಲ್ಲಿ ಕೆಲಸ ಪ್ರಾರಂಭಿಸಿದೆ. ಅದೇ ತಂಡದ ಮೂಲಕ ದ.ಕ, ಉಡುಪಿ, ಉ.ಕ. ಜಿಲ್ಲೆಗಳ ಪಶ್ಚಿಮ ಘಟ್ಟಗಳಲ್ಲಿಯೂ ಅಧ್ಯಯನ ಕೈಗೊಳ್ಳುವಂತೆ ಆದೇಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇತ್ತೀಚಿನ ಮಳೆಹಾನಿಗೆ ಸಂಬಂಧಿಸಿದಂತೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲಾ ಮಟ್ಟದ ಪರಿಶೀಲನಾ ಸಭೆಯ ಬಳಿಕ ಕರೆದ ಸುದ್ದಿಗೋಷ್ಠಿ ಯಲ್ಲಿ ಅವರು ಮಾತನಾಡುತಿದ್ದರು.

ಅಮೃತ ವಿವಿ ತಂಡ ಅಧ್ಯಯನದ ಬಳಿಕ ನೀಡುವ ವರದಿಯನ್ನು ಅನುಷ್ಠಾನ ಗೊಳಿಸಲು ಸರಕಾರ ಸಿದ್ಧವಿದೆ. ಅದೇ ರೀತಿ ಕೊಡಗು ಹಾಗೂ ಕರಾವಳಿಯ ಕೆಲವು ಭಾಗಗಳಲ್ಲಿ ಭೂಕಂಪನದ ಸಮಸ್ಯೆಗಳಿವೆ. ಭೂಕಂಪನದ ಅಧ್ಯಯನ ಮಾಡಲು ಜಿಯೋಗ್ರಾಫಿಕಲ್ ಸರ್ವೇ ಆಫ್ ಇಂಡಿಯಾ ಬೆಂಗಳೂರು ಹಾಗೂ ಮೈಸೂರು ವಿವಿಯಿಂದ ಸುದೀರ್ಘ  ಅಧ್ಯಯನ ನಡೆಸಿ ಪರಿಹಾರ ಸೂಚಿಸಿ  ವರದಿ ಸಲ್ಲಿಸಲು ಸೂಚಿಸಲಾಗಿದೆ.ಪರಿಹಾರವಾಗಿ ರೆಟ್ರೋ ಫಿಟ್ಟಿಂಗ್ ಮಾಡಲು ಸಲಹೆ ನೀಡಿದ್ದಾರೆ. ಅದರ ಅಂತಿಮ ವರದಿ ನೀಡಲು ಆದೇಶಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

ಕರಾವಳಿಯಲ್ಲಿ ಮಳೆಹಾನಿಗೆ ೮ ಬಲಿ: ಈ ಬಾರಿಯ ಭಾರೀ ಮಳೆಗೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಒಟ್ಟು ಎಂಟು ಮಂದಿ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೫ ಜನ ಮೃತಪಟ್ಟಿದ್ದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಸುಮಾರು ೨೧೬ ಹೆಕ್ಟೇರ್ ಬೆಳೆ ಹಾನಿಯಾದರೆ, ಉಡುಪಿಯಲ್ಲಿ ೧೨೯ ಹೆಕ್ಟೇರ್ ಪ್ರದೇಶದ ಬೆಳೆಹಾನಿ ಸೇರಿ ಕೃಷಿ ಮತ್ತು ತೋಟಗಾರಿಕೆಯಲ್ಲಿ ಒಟ್ಟು ೩೫೫ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದರು.

ದಕ್ಷಿಣ ಕನ್ನಡದಲ್ಲಿ ೪೨೯ ಮನೆಗಳು, ಉತ್ತರಕನ್ನಡ ಜಿಲ್ಲೆಯಲ್ಲಿ ೪೩೭ ಮನೆಗಳು ಹಾಗೂ ಉಡುಪಿಯಲ್ಲಿ ೧೯೬ ಮನೆಗಳು ಸೇರಿದಂತೆ ಒಟ್ಟು ೧೦೬೨ ಮನೆಗಳು ಹಾನಿಗೊಳಗಾಗಿವೆ. ೫೮ ಮನೆಗಳು ಪೂರ್ಣ ಪ್ರಮಾಣದಲ್ಲಿ ಹಾನಿಗೊಂಡಿದ್ದರೆ, ೨೬ ಮನೆಗಳಿಗೆ ತೀವ್ರ ಹಾನಿ ಹಾಗೂ ೧೦೨೬ ಮನೆಗಳು ಅಲ್ಪ ಪ್ರಮಾಣದಲ್ಲಿ ಹಾನಿಗೊಳಗಾಗಿವೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು. 

ಲೋಕೋಪಯೋಗಿ ಹಾಗೂ ಗ್ರಾಮೀಣ ರಸ್ತೆಗಳು ಸೇರಿ ದಕ್ಷಿಣ ಕನ್ನಡದಲ್ಲಿ ೭೨೭ ಕಿ.ಮಿ,  ಉತ್ತರ ಕನ್ನದ ೫೦೦ ಕಿ.ಮೀ ಹಾಗೂ ಉಡುಪಿಯ ೯೬೦ ಕಿ.ಮೀ ಸೇರಿ ಒಟ್ಟು ೨೧೮೭ ಕಿ.ಮೀ ರಸ್ತೆ ಹಾನಿಗೊಳಗಾಗಿವೆ. ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದಂತೆ ಮೂರು ಜಿಲ್ಲೆಗಳಲ್ಲಿ ೫೫೯೫ ವಿದ್ಯುತ್ ಕಂಬಗಳು ಬಿದ್ದಿವೆ. ೪೨೨ ಟ್ರಾನ್ಸಫಾಮರ್‌ಗಳು ಹಾನಿಗೊಂಡಿದ್ದು ದುರಸ್ತಿ ಕೆಲಸ  ನಡೆದಿದೆ. ೧೬೮ ಸೇತುವೆ ಮತ್ತು  ಕಾಲುಸಂಕಗಳು ಸಹ ಹಾನಿಗೊಂಡಿವೆ ಎಂದರು.

ಕಾಳಜಿ ಕೇಂದ್ರ: ಈ ಬಾರಿ ಇದುವರೆಗೆ ಒಟ್ಟು ೧೨ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಭಾರಿ ಮಳೆಯಿಂದಾಗಿ ತೀರಿಕೊಂಡವರಿಗೆ ಕೇಂದ್ರ ಸರ್ಕಾರ ೪ ಲಕ್ಷ ರೂ.ಗಳ ಪರಿಹಾರ ಮೊತ್ತ ನೀಡುತ್ತದೆ. ರಾಜ್ಯ ಸರಕಾರ ೫ ಲಕ್ಷ ರೂ. ನೀಡುತ್ತಿದೆ. ಕಾಳಜಿ  ಕೇಂದ್ರಗಳಿಗೆ ಕೆಲವರು ಬಂದರೆ, ಕೆಲವರು ಬರುವುದಿಲ್ಲ. ಈ ಬಾರಿ ಅವರಿಗೆ ನೀಡುವ ಆಹಾರದಲ್ಲಿ ಪೌಷ್ಟಿಕಾಂಶ ನೀಡಲು ಮೊಟ್ಟೆ ಯನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿದೆ. ಕೇಂದ್ರಕ್ಕೆ ಬಾರದೇ ಸಂಬಂಧಿಕರ ಮನೆಗಳಲ್ಲಿ ಇರುವವರಿಗೆ ಆಹಾರ ಕಿಟ್ ನೀಡಲು ಆದೇಶ ನೀಡಲಾಗಿದೆ ಎಂದರು.

ಮುಂದಿನ ವಾರ ಕಾರವಾರ, ಬೆಳಗಾವಿಗೆ: ಅತಿವೃಷ್ಠಿಯಿಂದ ಹಾನಿಗೊಳಗಾದ ಕಾರವಾರ, ಬೆಳಗಾವಿ, ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಮುಂದಿನ ವಾರ ಪ್ರವಾಸ ಮಾಡಿ, ಅಲ್ಲಿಯೂ ಸ್ಥಳ ಪರಿಶೀಲನೆ ನಡೆಸಿ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. 

ಕಡಲ ಕೊರೆತ; ಶಾಶ್ವತ ಪರಿಹಾರಕ್ಕೆ ಕ್ರಮ

ಹಲವಾರು ವರ್ಷಗಳಿಂದ ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದರೂ, ಕಡಲ ಕೊರೆತ ನಿಂತಿಲ್ಲ. ಎಡಿಬಿ ಯೋಜನೆಯಡಿ ಕಡಲ ಕೊರೆತಕ್ಕೆ ೩೦೦ ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ೩೩೦ ಕಿಮೀ ಕಡಲ ತೀರದುದ್ದಕ್ಕೂ   ಇದನ್ನು ಅಳವಡಿಸಬೇಕಿದ್ದರೆ ಎಡಿಬಿ ಕೆಲಸದಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸಿ ಸೀ ವೇವ್ ಬ್ರೇಕರ್ ಎಂಬ ಹೊಸ ತಂತ್ರಜ್ಞಾನವನ್ನು ಬಳಕೆ ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ ಕೇರಳದಲ್ಲಿ ಇದನ್ನು ಅಳವಡಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಈ ತಂತ್ರಜ್ಞಾನವನ್ನು ಮಂಗಳೂರಿನ ಉಳ್ಳಾಲದಲ್ಲಿ ಪ್ರಾಯೋಗಿಕವಾಗಿ ಒಂದು ಕಿ.ಮೀ.ವ್ಯಾಪ್ತಿಯಲ್ಲಿ ಜಾರಿಗೊಳಿಸಲಾಗುತ್ತದೆ. ಅದು ಯಶಸ್ವಿಯಾದರೆ ಇಡೀ ಕರಾವಳಿ ಭಾಗದಲ್ಲಿ ಅನುಷ್ಠಾನಕ್ಕೆ ತರುವ ಚಿಂತನೆ ನಮ್ಮದು. ಇದಕ್ಕಾಗಿ ಉನ್ನತ ಮಟ್ಟದ ಶಾಶ್ವತ ಸಮಿತಿ ರಚಿಸಲಾಗುವುದು ಎಂದರು.

ತಂತ್ರಜ್ಞಾನ ಯಶಸ್ವಿಯಾದರೆ ಸಂಪೂರ್ಣ ಕರಾವಳಿಯ ಡಿಪಿಆರ್ ಸಿದ್ಧಪಡಿಸಿ ಬಾಹ್ಯ ಏಜೆನ್ಸಿಯ ಹಣಕಾಸಿನ ನೆರವಿನಿಂದ  ಇದನ್ನು ಅನುಷ್ಠಾನ ಗೊಳಿಸಲು ತೀರ್ಮಾನ ಕೈಗೊಳ್ಳಲಾಗುವುದು. ಡಿಪಿಆರ್‌ಗೆ ಅಗತ್ಯವಿರುವ ಅನುದಾನ ಕೂಡಲೇ ಬಿಡುಗಡೆ ಮಾಡಲಾಗುವುದು. ಅದರ ವಿಸ್ತೃತ ಅಧ್ಯಯನ ನಡೆದ ನಂತರ ಹಣಕಾಸಿನ ವ್ಯವಸ್ಥೆಗೆ ತೀರ್ಮಾನ ಮಾಡಲಾಗುವುದು ಎಂದು ಅವರು ವಿವರಿಸಿದರು.

ಕಡಲ ಕೊರೆತ ತಕ್ಷಣ ನಿಲ್ಲಿಸಲು ಮೂರು ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಕೂಡಲೇ   ಹಣವನ್ನು ಎಸ್‌ಡಿಆರ್‌ಎಫ್ ಅಡಿಯಲ್ಲಿ  ಒದಗಿಸಲಾಗುವುದು. ಸದ್ಯ ತಾತ್ಕಾಲಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗುವುದು ಎಂದರು.

ಶಾಶ್ವತ ಪರಿಹಾರಕ್ಕೆ  ೨-೩ ತಿಂಗಳಲ್ಲಿ ಯೋಜನೆ ರೂಪಿಸಲಾಗುವುದು. ಪ್ರತಿ ವರ್ಷ ಆಗುವ ಕಡಲ ಕೊರೆತ ತಡೆಯಲು  ಜಿಲ್ಲಾಧಿಕಾರಿಗಳ ಹಂತದಲ್ಲಿ ಕೆಲವು ಕಾರ್ಯಕ್ರಮಗಳನ್ನು  ನಿರಂತರವಾಗಿ ರೂಪಿಸಬೇಕು ಎಂದು ಸೂಚನೆ ನೀಡಿ ವಿಶೇಷ ಅನುದಾನವನ್ನು  ಇದಕ್ಕಾಗಿ ಒದಗಿಸಲಾಗುವುದು ಎಂದೂ ಬೊಮ್ಮಾಯಿ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X