Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಿಂದುತ್ವವನ್ನೇ ಆಧಾರವಾಗಿಟ್ಟುಕೊಂಡು...

ಹಿಂದುತ್ವವನ್ನೇ ಆಧಾರವಾಗಿಟ್ಟುಕೊಂಡು ಅಧಿಕಾರ ನಡೆಸುತ್ತಿದ್ದೇವೆ: ಸಚಿವ ಸುನೀಲ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ1 Aug 2022 2:12 PM IST
share
ಹಿಂದುತ್ವವನ್ನೇ ಆಧಾರವಾಗಿಟ್ಟುಕೊಂಡು ಅಧಿಕಾರ ನಡೆಸುತ್ತಿದ್ದೇವೆ: ಸಚಿವ ಸುನೀಲ್ ಕುಮಾರ್

ಉಡುಪಿ, ಆ.1: ಸರಕಾರ ಬೇಕೋ ಹಿಂದುತ್ವ ಬೇಕೋ ಕೇಳಿದಾಗ ನಾವು ಸರಕಾರವನ್ನು ಬದಿಗಿಟ್ಟು ಹಿಂದುತ್ವವನ್ನು ಆಯ್ಕೆ ಮಾಡುತ್ತೇವೆ. ನಾವು ಇವತ್ತು ಹಿಂದುತ್ವವನ್ನೇ ಆಧಾರವಾಗಿ ಇಟ್ಟುಕೊಂಡು ಅಧಿಕಾರ ನಡೆಸುತ್ತಿದ್ದೇವೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದ.ಕ. ಜಿಲ್ಲೆಯಲ್ಲಿ ಕೊಲೆಯಾದ ಮಸೂದ್ ಮತ್ತು ಫಾಝಿಲ್ ಎಂಬವರ ಮನೆಗಳಿಗೆ ಮುಖ್ಯಮಂತ್ರಿ ಭೇಟಿ ನೀಡದಿರುವ ಕುರಿತು ಎದ್ದಿರುವ ವ್ಯಾಪಕ ಆಕ್ರೋಶದ ಮಾಧ್ಯಮದವರು ಗಮನಸೆಳೆದಾಗ ಅವರು ಈ ರೀತಿ ಪ್ರತಿಕ್ರಿಯಿಸಿದರು.

ಈ ಬಗ್ಗೆ ಮುಖ್ಯಮಂತ್ರಿ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ನಾನು ಸ್ಪಷ್ಟನೆ ಕೊಡಬೇಕಾದ ಅಗತ್ಯವಿಲ್ಲ. ಹಿಂದೂ ಮತ್ತು ಅಧಿಕಾರ ಎಂಬ ವಿಚಾರ ಬಂದಾಗ ನಾವು ಹಿಂದುತ್ವ ಆಯ್ಕೆ ಮಾಡುತ್ತೇವೆ. ಇದೇ ಕಾರಣಕ್ಕೆ ನಾವು ಗೋಹತ್ಯೆ ನಿಷೇಧ, ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿರುವುದು ಎಂದು ಸುನೀಲ್ ಕುಮಾರ್ ನುಡಿದರು.

ಪ್ರವೀಣ್ ಹತ್ಯೆ ಪ್ರಕರಣ: ಮಹತ್ವದ ಸುಳಿವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮುಕ್ತವಾದ ತನಿಖೆಗೆ ಅವಕಾಶ ಮಾಡಿಕೊಟ್ಟಿದ್ದೇವೆ. ರವಿವಾರ ಸಂಜೆ ವೇಳೆಗೆ ಮಹತ್ತರವಾದ ಸುಳಿವು ಸಿಕ್ಕಿದೆ ಎಂದು ಇಲಾಖೆ ಮೂಲಕ ಗೊತ್ತಾಗಿದೆ ಎಂದು ಸಚಿವರು ತಿಳಿಸಿದರು.

ನಾನು ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಹೋಗಿಲ್ಲ. ಎಡಿಜಿಪಿ ಅವರು ಇಲ್ಲೇ ಮೊಕ್ಕಾಂ ಹೂಡಿದ ಕಾರಣಕ್ಕೆ ಹಾಗೂ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಪತ್ತೆ ಹಚ್ಚುವ ಕಾರ್ಯ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಯಾರು ಹಣಕಾಸಿನ ನೆರವು ನೀಡಿದ್ದಾರೆ ಹಾಗೂ ಯಾರು ನಿಜವಾದ ಕೊಲೆಗಡುಕರು ಎಂಬುದನ್ನು ಪೋಲಿಸ್ ಇಲಾಖೆ ಪತ್ತೆ ಹಚ್ಚುವ ವಿಶ್ವಾಸ ಇದೆ ಎಂದರು.

ಪ್ರತೀಕಾರದ ಕೊಲೆಗಳ ಕುರಿತು ಪ್ರತಿಕ್ರಿಯಿಸಿದ ಸಚಿವ ಸುನೀಲ್ ಕುಮಾರ್, ಹತ್ಯೆಯನ್ನು ಯಾರು ಸಮರ್ಥಿಸಿಕೊಳ್ಳುವುದಿಲ್ಲ. ವೈಚಾರಿಕ ವಿಚಾರಗಳ ಚರ್ಚೆ ಮೂಲಕ ನಡೆಯಬೇಕೇ ಹೊರತು ಹಿಂಸಾರೂಪದಲ್ಲಿ ಯಾವುದೂ ನಡೆಯಬಾರದು. ಆದರೆ ಜಿಹಾದಿ ಹಿಂಸಾಚಾರ ಕೇವಲ ಮಂಗಳೂರಿಗೆ ಮಾತ್ರ ಸೀಮಿತವಾಗಿಲ್ಲ. ಅದು ದೇಶದ ಹಲವು ರಾಜ್ಯ ಹಾಗೂ ರಾಜ್ಯದ ಹಲವು ಜಿಲ್ಲೆಗಳಿಗೆ ವಿಸ್ತರಿಸಿರುವುದು ನಾವು ಕಂಡಿದ್ದೇವೆ. ಈ ಕುರಿತಂತೆ ಆ ನಿರ್ದಿಷ್ಟ ಸಮುದಾಯದವರು ಯೋಚಿಸಬೇಕು ಎಂದರು.

ಪಕ್ಷದ ಕಾರ್ಯಕರ್ತರ ಕೋಪ, ಹಿಂದುತ್ವ ಸಂಘಟನೆಗಳ ಆಕ್ರೋಶದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಕಾರ್ಯಕರ್ತರ ಕೋಪವನ್ನು ನಾನು ಎಂದೂ ಸರಿಯಲ್ಲ ಅಂತ ಹೇಳಿಲ್ಲ. ಒಂದು ಮನೆಯಲ್ಲಿ ಅಪಸ್ವರಗಳು ಇದ್ದೇ ಇರುತ್ತವೆ. ತಂದೆ ತಪ್ಪು ಮಾಡಿದರೆ ಮಗ , ಮಗ ತಪ್ಪು ಮಾಡಿದರೆ ತಂದೆ ಹೇಳಲೇಬೇಕು. ಇದು ಭಿನ್ನಾಭಿಪ್ರಾಯ ಅಲ್ಲ,  ಕಾರ್ಯಕರ್ತರ ಭಾವನೆಯನ್ನು ನಾವು ಸ್ವೀಕರಿಸಿದ್ದೇವೆ. ಮತ್ತೆ ನಾವು ಆ ಕಾರ್ಯಕರ್ತರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಕಾರ್ಯ ಮಾಡುತ್ತೇವೆ. ಆಕ್ರೋಶದ ತೀವ್ರತೆ  ಕಾರಣಕ್ಕೆ ರಾಷ್ಟ್ರೀಯತೆಯಿಂದ ವಿಮುಖ ಆಗುವ ಪ್ರಶ್ನೆಯೇ ಇಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X