ಬ್ರಹ್ಮಾವರದಲ್ಲಿ ಕಾಂಗ್ರೆಸ್ ಅಮೃತಮಹೋತ್ಸವದ ಪಾದಯಾತ್ರೆ
ಬ್ರಹ್ಮಾವರ: ದೇಶದ 75ನೇ ಸ್ವಾತಂತ್ರೋತ್ಸವದ ಅಮೃತಮಹೋತ್ಸವದ ಅಂಗವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಹಯೋಗದೊಂದಿಗೆ ರವಿವಾರ ಬ್ರಹ್ಮಾವರದಲ್ಲಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು.
ಬ್ರಹ್ಮಾವರ ಬಸ್ ನಿಲ್ದಾಣದ ಬಳಿಯಿಂದ ಹೊರಟ ಕಾಲ್ನಡಿಗೆ ಜಾಥವು ತಾಲೂಕು ಕಛೇರಿ ಮಾರ್ಗವಾಗಿ, ಬ್ರಹ್ಮಾವರ ಪೇಟೆ ಆಕಾಶವಾಣಿ ಸರ್ಕಲ್ ಬಾರ್ಕೂರು ರಸ್ತೆ ಹಂದಾಡಿ ಶಾಲೆಯ ಬಳಿ ತಿರುವಿನಲ್ಲಿ ಹಂದಾಡಿಗೆ ಸಾಗಿ ಅಲ್ಲಿಂದ ನೇರ ಕುಮ್ರಗೋಡು ರಾಷ್ಟ್ರೀಯ ಹೆದ್ದಾರಿ ತಲುಪಿ ಉಪ್ಪಿನಕೋಟೆ ಮಾರ್ಗವಾಗಿ ವಾರಂಬಳ್ಳಿ ಹಾಲು ಉತ್ಪಾದಕರ ಸಂಘದ ಬಳಿ ಸಮಾಪನ ಗೊಂಡಿತು.
ಜಾಥಾದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ಕೆಪಿಸಿಸಿ ಪ್ಯಾನೇಲಿಸ್ಟ್ ವೆರೋನಿಕಾ ಕರ್ನೆಲೀಯೋ, ಜಿಪಂ ಮಾಜಿ ಅಧ್ಯಕ್ಷ ಭುಜಂಗ ಶೆಟ್ಟಿ, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮುಖಂಡರಾದ ಪ್ರಖ್ಯಾತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.