ಬೋಟಿನಿಂದ ನೀರಿಗೆ ಬಿದ್ದು ನಾಪತ್ತೆ
ಮಲ್ಪೆ, ಆ.10: ಮಲ್ಪೆ ಬಂದರಿನಲ್ಲಿ ಮಂಜಿ ಧಕ್ಕೆಯಲ್ಲಿ ಬೋಟಿನಿಂದ ಆಯತಪ್ಪಿ ನೀರಿಗೆ ಬಿದ್ದು ಮೀನುಗಾರ ರೊಬ್ಬರು ನಾಪತ್ತೆಯಾಗಿರುವ ಘಟನೆ ಆ.9ರಂದು ಸಂಜೆ ವೇಳೆ ನಡೆದಿದೆ.
ನಾಪತ್ತೆಯಾದವರನ್ನು ತಮಿಳುನಾಡು ಮೂಲದ ಗಣೇಶನ್ (51) ಎಂದು ಗುರುತಿಸಲಾಗಿದೆ. ಇವರು ಕಾಸರಗೋಡಿನ ಇಮ್ಯಾನುವೆಲ್ ಕಿರಣ್ ಎಂಬವರ ರಾಯಲ್ ಫಿಶರ್ ಬೋಟ್ನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು. ಮೀನುಗಾರರೆಲ್ಲ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಲು ದಕ್ಕೆಯಲ್ಲಿ ತಯಾರಿ ನಡೆಸುತ್ತಿರುವಾಗ, ಗಣೇಶನ್ ಬೋಟಿನ ಹಿಂಬದಿಯಲ್ಲಿ ಮೂತ್ರ ವಿಸರ್ಜನೆ ಮಾಡಲು ಹೋದರು. ಆಗ ಆಯತಪ್ಪಿ ಆಕಸ್ಮಿಕವಾಗಿ ಬೋಟಿನಿಂದ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story