ಕೋಟ; ಆರ್ಟಿಓ ಬ್ರೋಕರ್ ಆತ್ಮಹತ್ಯೆ
ಕೋಟ: ಆರ್ಟಿಓ ಬ್ರೋಕರ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಮರಣ ಪತ್ರ ಬರೆದಿಟ್ಟು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಕೊಡವೂರು ಗ್ರಾಮದ ಮೂಡುಬೆಟ್ಟು ನಿವಾಸಿ ಅಶೋಕ ಸುವರ್ಣ(49) ಎಂದು ಗುರುತಿಸಲಾಗಿದೆ. ಆರ್ಟಿಓ ಬ್ರೋಕರ್ ಕೆಲಸ ಮಾಡುತ್ತಿದ್ದ ಇವರು, ಸುಮಾರು 15 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡ ಇವರು, ಬ್ರಹ್ಮಾವರ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಚೀಟಿ ಬರೆದಿಟ್ಟು ಆ.13ರಂದು ಬೈಕಿನಲ್ಲಿ ಮನೆಯಿಂದ ಹೋದವರು ನಾಪತ್ತೆಯಾಗಿದ್ದರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆ.14ರಂದು ಇವರ ಮೃತದೇಹ ಬ್ರಹ್ಮಾವರ ಹಂಗಾರಕಟ್ಟೆಯ ಹೊಳೆಯ ದಡದಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story