ಬ್ರಹ್ಮಾವರ ತಾಲೂಕು ಆಡಳಿತದಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ
ಬ್ರಹ್ಮಾವರ: ಬ್ರಹ್ಮಾವರ ತಾಲೂಕು ಆಡಳಿತದ ವತಿಯಿಂದ ಬ್ರಹ್ಮಾವರ ಗಾಂಧಿ ಮೈದಾನದಲ್ಲಿ ಜರುಗಿದ 75ನೇ ಸ್ವಾತಂತ್ರ್ಯೋತ್ಸವ ದಿನಾ ಚರಣೆಯ ಧ್ವಜಾರೋಹಣವನ್ನು ಬ್ರಹ್ಮಾವರ ತಹಶೀಲ್ದಾರ ರಾಜಶೇಖರ ಮೂರ್ತಿ ನೆರವೇರಿಸಿದರು.
ಬಳಿಕ ಅವರು ಬ್ರಹ್ಮಾವರ, ಕೋಟ ಪೋಲೀಸರಿಂದ ಮತ್ತು ಸ್ಥಳಿಯ ಶಾಲಾ ವಿದ್ಯಾರ್ಥಿಗಳಿಂದ ನಡೆದ ಪಥ ಸಂಚಲನದಲ್ಲಿ ಧ್ವಜ ವಂದನೆ ಸ್ವೀಕರಿಸಿದರು. ಕುಂದಾಪುರ ನ್ಯಾಯವಾದಿ ಟಿ.ಬಿ.ಶೆಟ್ಟಿ ಮಾತನಾಡಿದರು. ಇದೇ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಪಿ.ವಿ.ಭಂಡಾರಿ, ಮಾಧ್ಯಮ ಕ್ಷೇತ್ರದಲ್ಲಿ ಬಂಡೀಮಠ ಶಿವರಾಮ ಆಚಾರ್ಯ, ಸಾಹಿತ್ಯ ಕ್ಷೇತ್ರದಲ್ಲಿ ಜಾನಕಿ ಬ್ರಹ್ಮಾವರ, ಕೃಷಿ ಕ್ಷೇತ್ರದಲ್ಲಿ ಪ್ರಸನ್ನ ಭಟ್ ಮತ್ತು ನಾಟಿ ವೈದ್ಯದಲ್ಲಿ ನೀಲಕಂಠ ವೈದ್ಯ ಮುದ್ದೂರು ಇವರನ್ನು ಸನ್ಮಾನಿಸಲಾಯಿತು.
ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು. ತಾಪಂ ಕಾರ್ಯನಿರ್ವಣಾಧಿಕಾರಿ ಇಬ್ರಾಹಿಂಪುರ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಟಿ.ನಾಯ್ಕ್, ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ, ಎಸ್ಸೈ ಗುರುನಾಥ್ ಬಿ.ಹಾದಿಮನೆ, ಕೋಟ ಠಾಣೆಯ ಎಸ್ಸೈ ಮಧು, ಹಂದಾಡಿ ಗ್ರಾಪಂ ಅಧ್ಯಕ್ಷ ನಿರಂಜನ ಪೂಜಾರಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಉಪಸ್ಥಿತರಿದ್ದರು. ಶಶಿಧರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಂದಾಯ ನೀರೀಕ್ಷಕ ಲಕ್ಷ್ಮೀನಾರಾಯಣ ಭಟ್ ವಂದಿಸಿದರು.