ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಶಂಕರನಾರಾಯಣ, ಸೆ.19: ಅನಾರೋಗ್ಯದಿಂದ ಬಳಲುತ್ತಿದ್ದ ಶಂಕರನಾರಾ ಯಣ ಗ್ರಾಮ ಯಡಮಕ್ಕಿ ನಿವಾಸಿ ತಿಮ್ಮ ದೇವಾಡಿಗ(85) ಎಂಬವರು ಜೀವನದಲ್ಲಿ ಜೀಗುಪ್ಸೆಗೊಂಡು ಮನೆಯ ಎದುರಿನ ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು: ಹೋಟೆಲ್ ವ್ಯವಹಾರ ಮಾಡಿಕೊಂಡಿದ್ದ ಕಾಲ್ತೋಡು ಗ್ರಾಮದ ಕಬ್ಸೆ ಬಾಳೆಹಿತ್ಲು ನಿವಾಸಿ ರಾಘವೇಂದ್ರ ಶೆಟ್ಟಿ(37) ಎಂಬವರು ವೈಯಕ್ತಿಕ ಕಾರಣ್ಕೆ ಮನನೊಂದು ಸೆ.18ರ ಬೆಳಗ್ಗೆಯಿಂದ ಸೆ.19ರ ಬೆಳಗಿನ ಮಧ್ಯಾವಧಿಯಲ್ಲಿ ಮನೆ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story