ಅ.1-2ರಂದು ಯಶವಂತಪುರ-ಮುರ್ಡೇಶ್ವರ ನಡುವೆ ವಿಶೇಷ ರೈಲು ಸಂಚಾರ
ಸಾಂದರ್ಭಿಕ ಚಿತ್ರ
ಉಡುಪಿ, ಸೆ. 29: ದಕ್ಷಿಣ ರೈಲ್ವೆಯ ಸಹಯೋಗದೊಂದಿಗೆ ಮುರ್ಡೇಶ್ವರ ಹಾಗೂ ಬೆಂಗಳೂರಿನ ಯಶವಂತಪುರ ನಡುವೆ ಅ.1 ಮತ್ತು 2ರಂದು ಹಬ್ಬದ ವಿಶೇಷ ಎಕ್ಸ್ಪ್ರೆಸ್ ರೈಲು ಓಡಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
ರೈಲು ನಂ.06563 ಯಶವಂತಪುರ-ಮುರ್ಡೇಶ್ವರ ಹಬ್ಬದ ವಿಶೇಷ ಎಕ್ಸ್ಪ್ರೆಸ್ ರೈಲು ಅ.1ರ ಶನಿವಾರ ರಾತ್ರಿ 11:55ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಅಪರಾಹ್ನ 12:55ಕ್ಕೆ ಮುರ್ಡೇಶ್ವರ ತಲುಪಲಿದೆ. ನಂತರ ರೈಲು ನಂ. 06544 ಮುರ್ಡೇಶ್ವರ- ಯಶವಂತಪುರ ವಿಶೇಷ ಎಕ್ಸ್ಪ್ರೆಸ್ ರೈಲು ಅ.2ರಂದು ರವಿವಾರ ಅಪರಾಹ್ನ 1:30ಕ್ಕೆ ಮುರ್ಡೇಶ್ವರದಿಂದ ಹೊರಟು ಸೋಮವಾರ ಬೆಳಗಿನ ಜಾವ 4 ಗಂಟೆಗೆ ಯಶವಂತಪುರ ನಿಲ್ದಾಣ ತಲುಪಲಿದೆ.
ಈ ರೈಲಿಗೆ ಚಿಕ್ಕ ಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚೆನ್ನರಾಯಪಟ್ಟಣ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ-ಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರಕೂರು, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು ಹಾಗೂ ಭಟ್ಕಳಗಳಲ್ಲಿ ನಿಲುಗಡೆ ಇರುತ್ತದೆ.
ಈ ರೈಲು ಏಳು ಸ್ಲೀಪರ್ ಕೋಚ್, 4 ಸೆಕೆಂಡ್ ಸೀಟಂಗ್ ಕೋಚ್ ಸೇರಿದಂತೆ ಒಟ್ಟು 16 ಎಲ್ಎಚ್ಬಿ ಬೋಗಿಗಳನ್ನು ಹೊಂದಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.