ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು
ಹಿರಿಯಡ್ಕ, ಸೆ.29: ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೆ.29ರಂದು ರಾತ್ರಿ ವೇಳೆ ಗುಡ್ಡೆಯಂಗಡಿ ಪಿಶ್ ಮಾರ್ಕೇಟ್ ಬಳಿ ನಡೆದಿದೆ.
ಮೃತರನ್ನು ಗುಡ್ಡೆಯಂಗಡಿ ನೆಡ್ಲುಬೈಲು ನಿವಾಸಿ ಮನೋಹರ ಜೋಗಿ(33) ಎಂದು ಗುರುತಿಸಲಾಗಿದೆ. ಗುಡ್ಡೆಯಂಗಡಿ ಕಡೆಯಿಂದ ಕಾರ್ಕಳ ಕಡೆ ಹೋಗು ತ್ತಿದ್ದ ಬೈಕಿಗೆ ಕಾರ್ಕಳ ಕಡೆಯಿಂದ ಬಂದ ಬಸ್, ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಮನೋಹರ್, ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story