ಕೆಮ್ತೂರು ನಾಟಕ ಪ್ರಶಸ್ತಿಗಾಗಿ ನಾಟಕ ತಂಡಗಳಿಗೆ ಆಹ್ವಾನ
ಸಾಂದರ್ಭಿಕ ಚಿತ್ರ
ಉಡುಪಿ, ಅ.3: ಉಡುಪಿ ತುಳುಕೂಟದ ವತಿಯಿಂದ ಕೆಮ್ತೂರು ನಾಟಕ ಪ್ರಶಸ್ತಿಗಾಗಿ ಕೆಮ್ತೂರು ದೊಡ್ಡಣ್ಣ ಶೆಟ್ಟಿ ಸ್ಮಾರಕ ತುಳು ನಾಟಕ ಸ್ಪರ್ಧೆಯ 21ನೇ ವರ್ಷದ ಸ್ಪರ್ಧೆಯನ್ನು ಜನವರಿ 2023ರ ಮೊದಲ ವಾರದಿಂದ ಉಡುಪಿಯಲ್ಲಿ ಆಯೋಜಿಸಲಾಗಿದೆ.
ದೇಶದ ಯಾವುದೇ ಪ್ರದೇಶದ ಯೋಗ್ಯ ತುಳು ಹವ್ಯಾಸಿ ನಾಟಕ ತಂಡಗಳಿಗೆ ಸ್ಪರ್ಧೆಯಲ್ಲಿ ಬಾಗವಹಿಸಲು ಅವಕಾಶವಿದೆ. ಸ್ಪರ್ಧೆಗೆ ಗರಿಷ್ಠ ಏಳು ನಾಟಕಗಳನ್ನು ಆಯ್ಕೆ ಮಾಡಲಾಗುವುದು. ವಿಜೇತ ತಂಡಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳೊಂದಿಗೆ 20,000ರೂ., 15,000ರೂ., 10,000ರೂ. ನಗದು ಬಹುಮಾನ, ಅಲ್ಲದೇ ನಿರ್ದೇಶನ, ಸಂಗೀತ, ರಂಗವಿನ್ಯಾಸ, ಬೆಳಕು, ನಟ, ನಟಿ ವಿಭಾಗಗಳಲ್ಲಿ ಪ್ರಥಮ 1,000ರೂ. ಮತ್ತು ದ್ವಿತೀಯ, ತೃತೀಯ ಬಹುಮಾನ ಕೊಡಲಾಗುವುದು. ಸ್ಪರ್ಧೆಗೆ ಆಯ್ಕೆಯಾದ ರಾಜ್ಯದೊಳಗಿನ ತಂಡಗಳಿಗೆ 5,000ರೂ. ಹಾಗೂ ಹೊರರಾಜ್ಯದ ತಂಡಗಳಿಗೆ 10,000ರೂ. ಭತ್ಯೆಯೊಂದಿಗೆ ಊಟ ಉಪಚಾರ ಮತ್ತು ಉತ್ತಮ ಸೌಕರ್ಯಗಳನ್ನು ಒದಗಿಸಲಾಗುವುದು.
ಸ್ಪರ್ಧೆಯಲ್ಲಿ ಬಾಗವಹಿಸಲಿಚ್ಛಿಸುವ ಕ್ರಿಯಾಶೀಲ ತುಳು ಹವ್ಯಾಸಿ ರಂಗತಂಡಗಳು ಮುದ್ರಿತ ಪ್ರವೇಶಪತ್ರ ಮತ್ತು ನಿಯಮಾವಳಿಗಳ ಬಗ್ಗೆ ಬಿ.ಪ್ರಬಾಕರ ಭಂಡಾರಿ, ಪ್ರಕೃತಿ 5-94ಅ,76ನೇ ಬಡಗುಬೆಟ್ಟು, ಬೈಲೂರು, ಉಡುಪಿ- 576101. ಮೊ. ಸಂ. 9880825626 ಅಥವಾ ಯಶೋಧ ಕೇಶವ್, ಭಗವತಿ ಕೃಪ, ಬಡಾನಿಡಿ ಯೂರು, ಕದಿಕೆ, ಉಡುಪಿ, ಮೊ.ಸಂ. 9036483463 ಇವರಿಗೆ ಬರೆಯಬೇಕು. ಪ್ರವೇಶ ಪತ್ರಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ 6-11-2022 ಆಗಿದೆ ಎಂದು ತುಳುಕೂಟ ಉಡುಪಿ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.