ಉತ್ತಮ ಉದ್ಯೋಗಕ್ಕಾಗಿ ಸಾಮರ್ಥ್ಯದ ಮೇಲೆ ನಂಬಿಕೆ ಅಗತ್ಯ: ಜಯಪ್ರಕಾಶ್ ಹೆಗ್ಡೆ
ಉದ್ಯೋಗ ಮೇಳ
ಉಡುಪಿ, ಅ.8: ಉತ್ತಮ ಉದ್ಯೋಗ ಪಡೆಯಲು ಉತ್ತಮ ಸಂವಹನ ಶಕ್ತಿ, ಕೌಶಲ್ಯ ಮತ್ತು ತನ್ನ ಸಾಮರ್ಥ್ಯದ ಮೇಲೆ ನಂಬಿಕೆ ಇರುವುದು ಅಗತ್ಯ. ಎಲ್ಲ ಸಂದರ್ಭದಲ್ಲಿ ಎಲ್ಲರಿಗೂ ಉದ್ಯೋಗ ಸಿಗದು. ನಿರಾಸೆಗೆ ಜಾರದೆ ಮುನ್ನುಗ್ಗಿದರೆ ಯಶಸ್ಸು ಖಂಡಿತ ದೊರೆಯುತ್ತದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನ ನಿರ್ಮಾಣ ಮತ್ತು ಅಭಿವೃದ್ಧಿ ಸಮಿತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಂಟರ ಸಂಘದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ನಲ್ಲಿ ಶನಿವಾರ ನಡೆದ ಎರಡು ದಿನಗಳ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡುತಿದ್ದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಂಗಳೂರು ಎಂಆರ್ಜಿ ಗ್ರೂಪ್ ಚೇರ್ ಮೆನ್ ಕೆ.ಪ್ರಕಾಶ್ ಶೆಟ್ಟಿ ಮಾತನಾಡಿ, ಹಿಂದೆ ಉದ್ಯೋಗವನ್ನು ಅರಸಿಕೊಂಡು ಅಲೆಯುವ ಪರಿಸ್ಥಿತಿ ಇತ್ತು. ಇಂದು ಉದ್ಯೋಗದಾತರೇ ನಿಮ್ಮಲ್ಲಿಗೆ ಬರುವಷ್ಟರ ಮಟ್ಟಿಗೆ ಇಂದಿನ ಯುವ ಜನತೆ ಅದೃಷ್ಟವಂತರಾಗಿದ್ದಾರೆ. ಉದ್ಯೋಗ ಗಳಿಸು ವುದು ಮುಖ್ಯವಲ್ಲ. ಗಳಿಸಿದ ಉದ್ಯೋಗವನ್ನು ಉಳಿಸಿಕೊಂಡು ಬೆಳೆಯುವುದು ಮುಖ್ಯ ಎಂದು ತಿಳಿಸಿದರು.
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿದರು. ಈ ಸಂದರ್ಭ ದಲ್ಲಿ ಕೆನರಾ ಬ್ಯಾಂಕ್ನ ಜನರಲ್ ಮ್ಯಾನೇಜರ್ ರಾಮ ನಾಯ್ಕ್ ಮತ್ತು ಸ್ಟೀಲ್ ಸ್ಟ್ರಾಂಗ್ ಮುಂಬಯಿ ಇದರ ಸಿಎಂಡಿ ರಮೇಶ್ ಶೆಟ್ಟಿ ಮತ್ತಿತ್ತರರನ್ನು ಸನ್ಮಾನಿಸ ಲಾಯಿತು. ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನ ನಿರ್ಮಾಣ ಮತ್ತು ಅಭಿವೃದ್ಧಿ ಸಮಿತಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಶಾಸಕ ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷ ಮಟ್ಟಾರ್ ರತ್ನಕರ್ ಹೆಗ್ಡೆ, ಉದ್ಯಮಿಗಳಾದ ಮನೋಹರ್ ಶೆಟ್ಟಿ, ನಿಟ್ಟೆ ಜಸ್ಟಿಸ್ ಕೆ.ಎಸ್ ಹೆಗ್ಡೆ ಇನಸ್ಟಿಟ್ಯೂಟ್ ಆಪ್ ಮೆನೇಜ್ಮೆಂಟ್ನ ಡೈರೆಕ್ಟರ್ ಪ್ರೋಕೆ ಶಂಕರನ್, ಬೆಲ್-ಒ-ಸೀಲ್ ವಾಲ್ವಸ್ನ ಡೈರೆಕ್ಟ್ ಸಪ್ನಾ ಸಾಲಿನ್ಸ್, ಕುಂತಳನಗರ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಸಕಾರಾಮ್ ಶೆಟ್ಟಿ, ನಿಟ್ಟೆ ಜಸ್ಟಿಸ್ ಕೆ.ಎಸ್ ಹೆಗ್ಡೆ ಇನಸ್ಟಿಟ್ಯೂಟ್ ಆಫ್ ಮೆನೇಜ್ ಮೆಂಟ್ನ ಪ್ರೊ.ಸುಧೀರ್ ರಾಜ್, ಉದ್ಯಮಿ ಪ್ರದೀಪ್ ಶೆಟ್ಟಿ, ಗ್ಲೇನ್ ಡಿಸೋಜ ಮುಖ್ಯ ಅತಿಥಿಗಳಾಗಿದ್ದರು.
ಗ್ರಾಮೀಣ ಬಂಟರ ಸಂಘದ ಟ್ರಸ್ಟಿ ಪದ್ಮನಾಭ ಹೆಗ್ಡೆ, ಟ್ರಸ್ಟ್ನ ಕೋಶಾಧಿಕಾರಿ ವಿಜಿತ್ ಶೆಟ್ಟಿ, ಸಂಘದ ಕಾರ್ಯದರ್ಶಿ ಕಾರ್ತಿಕ್ ಶೆಟ್ಟಿ, ಮಾಜಿ ಅಧ್ಯಕ್ಷ ಹೇಮಂತ್ ಶೆಟ್ಟಿ ಉಪಸ್ಥಿತರಿದ್ದರು. ಅಶೋಕ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ರಿಕ್ರೂಟ್ಮೆಂಟ್ ಡ್ರೈವ್ನ ಚೇರ್ಮೆನ್ ಗುರುಪ್ರಶಾಂತ್ ಭಟ್ ಪ್ರಾಸ್ತಾವಿಕ ವಾಗಿ ಮಾತನಾಡಿದರು. ವಿಜಿತ್ ಶೆಟ್ಟಿ ವಂದಿಸಿದರು. ಪ್ರೊ.ದಿವ್ಯಾರಾಣಿ ಪ್ರದೀಪ್ ಕಾರ್ಯಕ್ರಮ ನಿರೂಪಿಸಿದರು.
ಉದ್ಯೋಗ ಮೇಳದಲ್ಲಿ 25ಕ್ಕೂ ಹೆಚ್ಚು ಕಂಪನಿಗಳು ಭಾಗವಹಿವೆ. 1052 ಅಭ್ಯರ್ಥಿಗಳು ನೊಂದಣಿ ಮಾಡಿಕೊಂಡಿದ್ದು, ಈ ಪೈಕಿ 700 ಮಹಿಳಾ ಅಭ್ಯರ್ಥಿಗಳು ಭಾಗವಹಿಸಿದ್ದರು. ಪ್ರತಿ ಅಭ್ಯರ್ಥಿಗಳಿಗೆ ಗರಿಷ್ಠ 5 ಕಂಪನಿಗಲ್ಲಿ ಉದ್ಯೋಗಾವಕಾಸ ಕೋರಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು.