ನದಿಯಲ್ಲಿ ಮುಳುಗಿ ಮೀನುಗಾರ ನಾಪತ್ತೆ
ಫೈಲ್ ಫೋಟೊ
ಮಲ್ಪೆ, ಅ.8: ಕಲ್ಯಾಣಪುರದ ಸ್ವರ್ಣ ನದಿಯಲ್ಲಿ ದೋಣಿಯಲ್ಲಿ ಬಲೆ ಹಾಕಿ ಮೀನು ಹಿಡಿಯಲು ಹೋಗಿದ್ದ ಮೀನುಗಾರರೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.7ರಂದು ಸಂಜೆ ವೇಳೆ ನಡೆದಿದೆ.
ನಾಪತ್ತೆಯಾದವರನ್ನು ಶಿವರಾಜ್(32) ಎಂದು ಗುರುತಿಸಲಾಗಿದೆ.
ದೋಣಿಯಲ್ಲಿ ಬಲೆ ಬೀಸಿ ಮೀನುಗಾರಿಕೆ ಮಾಡುತ್ತಿರುವ ವೇಳೆ ಇವರು ಆಕಸ್ಮಿಕವಾಗಿ ಹೊಳೆಯ ನೀರಿಗೆ ಬಿದ್ದು ಮುಳುಗಿ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story