ಗಾಂಜಾ ಸೇವನೆ: ಇಬ್ಬರು ವಶಕ್ಕೆ
ಅಮಾಸೆಬೈಲು, ಅ.23: ಗಾಂಜಾ ಸೇವನೆಗೆ ಸಂಬಂಧಿಸಿ ಅ.21ರಂದು ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಂಗಡಿ ಗ್ರಾಮದ ಕೆಪಿಸಿ ಮೈದಾನದ ಬಳಿ ನಾಗರಾಜ (37) ಹಾಗೂ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಅಂಪಾರು ಪೇಟೆಯಲ್ಲಿ ಮಾಣಿ ಪ್ರಣಾಮ ಕುಮಾರ್ (21) ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ಪರೀಕ್ಷೆಗೆ ಒಳಪಡಿಸಿದ್ದಾರೆ. ವರದಿಯಲ್ಲಿ ಇವರಿಬ್ಬರು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story