Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ​ಮಾನವ ಕಳ್ಳ ಸಾಗಾಣಿಕೆಯ ವಿರುದ್ಧ...

ಉಡುಪಿ: ​ಮಾನವ ಕಳ್ಳ ಸಾಗಾಣಿಕೆಯ ವಿರುದ್ಧ ಜನಜಾಗೃತಿ ಅಭಿಯಾನ

31 Oct 2022 10:35 PM IST
share
ಉಡುಪಿ: ​ಮಾನವ ಕಳ್ಳ ಸಾಗಾಣಿಕೆಯ ವಿರುದ್ಧ ಜನಜಾಗೃತಿ ಅಭಿಯಾನ

ಉಡುಪಿ: ಉಡುಪಿ ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ, ಪಡಿ ಮಂಗಳೂರು, ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚೈಲ್ಡ್‌ಲೈನ್-1098 ಉಡುಪಿ ಜಿಲ್ಲೆ ಇವುಗಳ ಸಹ ಭಾಗಿತ್ವದಲ್ಲಿ ಓಯಶಿಸ್ ಇಂಡಿಯಾ ಮುಂಬೈ ವತಿಯಿಂದ ಮಾನವ ಕಳ್ಳ ಸಾಗಾಣಿಕೆಯ ವಿರುದ್ಧ ಜನಜಾಗೃತಿ ಅಭಿಯಾನ ಮುಕ್ತಿ ಬೈಕ್ ಚಾಲೆಂಜ್ ಕಾರ್ಯಕ್ರಮವನ್ನು ಸೋಮವಾರ ಉಡುಪಿ ಬೋರ್ಡ್ ಹೈಸ್ಕೂಲ್ ಆವರಣ ದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಶರ್ಮಿಳಾ ಎಸ್. ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಮಾನವ ಕಳ್ಳ ಸಾಗಣಿಕೆ ಜಾಲದ ವ್ಯಾಪ್ತಿ ಹೆಚ್ಚುತ್ತಿರುವುದು ಆತಂಕಕಾರಿ. ದುರ್ಬಲರು, ವಲಸೆ ಕಾರ್ಮಿಕರು, ತಮ್ಮನ್ನು ತಾವು ಕಾಪಾಡಿಕೊಳ್ಳಲು ಆಗದೇ ಇರುವವರು, ಮಕ್ಕಳು, ಮಹಿಳೆಯರು ಮಾನವ ಕಳ್ಳ ಸಾಗಾಣಿಕೆಗೆ ಬಲಿಯಾಗುತ್ತಿದ್ದಾರೆ ಎಂದು ತಿಳಿಸಿದರು.

ಹುಟ್ಟಿನಿಂದ ಸಾಯುವವರೆಗೆ ಎಲ್ಲರಿಗೂ ಕಾನೂನು ಅನ್ವಯವಾಗುತ್ತದೆ. ಆದುದರಿಂದ ಪ್ರತಿಯೊಬ್ಬರು ಕಾನೂನಿನ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ಮಕ್ಕಳಿಗೆ ಕಾನೂನು ಚೌಕಟ್ಟಿನೊಳಗೆ ವ್ಯವಹಾರ ಮಾಡುವ ಬಗ್ಗೆ ತಿಳಿಸಬೇಕು. ಇದರಿಂದ ಕಾನೂನು ತಿಳುವಳಿಕೆ ಸುಲಭವಾಗಲಿದೆ ಎಂದು ಅವರು ಹೇಳಿದರು.

ಉಡುಪಿ ಕ್ಷೇತ್ರ ಶಿಕ್ಷಣಾಕಾರಿ ಚಂದ್ರೇಗೌಡ, ಬಾಲನ್ಯಾಯ ಮಂಡಳಿ ಸದಸ್ಯೆ ಅಮೃತಕಲಾ, ಚೈಲ್ಡ್‌ಲೈನ್ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಉಪಾಧ್ಯಕ್ಷ ತಿಲೋತ್ತಮ ನಾಯಕ್, ತಾಲೂಕು ಕೇಂದ್ರದ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ, ಜತೆಕಾರ್ಯದರ್ಶಿ ವಾಸು ಆಚಾರ್ಯ, ಮಂಗಳೂರು ಪಡಿ ಸಂಸ್ಥೆಯ ಜಿಲ್ಲಾ ಸಂಯೋಜಕಿ ಸುನೀತಾ, ಸದಸ್ಯರಾದ ಕೃಷ್ಣ ಆಚಾರ್ಯ, ಮಂಜುಳಾ, ಬೋರ್ಡ್ ಪ.ಪೂ.ಕಾಲೇಜು ಪ್ರಾಂಶುಪಾಲೆ ಲೀಲಾಬಾಯಿ ಭಟ್, ಮುಖ್ಯೋಪಾಧ್ಯಾಯಿನಿ ಶಾಂತಿ ಪೈ, ಓಯಾಸಿಸ್ ಇಂಡಿಯಾದ ಡೇನಿಯಲ್ ಜಬ್ಬರಾಜ್, ಕ್ರೆಬಸ್ಟ್ ವಿವಿಯ ಆರ್ಮುಗಂ ಉಪಸ್ಥಿತರಿದ್ದರು.

ಈ ಸಂದರ್ಭ ಬೆಂಗಳೂರಿನ ಕ್ರಿಸ್ಟ್ ವಿವಿಯ ವಿದ್ಯಾರ್ಥಿಗಳಿಂದ ಮಾನವ ಕಳ್ಳ ಸಾಗಾಣಿಕೆಯ ವಿರುದ್ದ ಜನ ಜಾಗೃತಿ ಅಭಿಯಾನಕ್ಕೆ ಸಂಬಂಧಿಸಿದಂತೆ ಬೀದಿ ನಾಟಕ ಪ್ರದರ್ಶನಗೊಂಡಿತು.

share
Next Story
X