ಪ್ರತ್ಯೇಕ ಪ್ರಕರಣ: ಇಬ್ಬರ ನಾಪತ್ತೆ
ಗಂಗೊಳ್ಳಿ : ಮರವಂತೆ ಗ್ರಾಮದ ಮೂಡು ಮರವಂತೆ ನಿವಾಸಿ ವಿನಾಯಕ ರಾವ್ ಎಂಬವರ ಮಗ ವಿಜಯ ಕುಮಾರ್(33) ಎಂಬವರು ಅ.25ರಂದು ಬೆಳಗ್ಗೆ ಬ್ಯಾಂಕಿಗೆ ಕೆಲಸಕ್ಕೆಂದು ಹೋದವರು ಈವರೆಗೆ ವಾಪಾಸ್ಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ರಜೆಯಲ್ಲಿ ಇಂಟೆನ್ಶಿಫ್ ಮಾಡಲು ಅ.31ರಂದು ಕಾರ್ಕಳದಿಂದ ಮಂಗಳೂರಿಗೆ ಹೋಗುವುದಾಗಿ ಹೇಳಿ ಹೋದ ಮೂಡಬಿದ್ರೆಯ ಕಾಲೇಜಿನ ಪ್ರಥಮ ವರ್ಷದ ಎಂ.ಬಿ.ಎ ವಿದ್ಯಾರ್ಥಿ ಶ್ರೇಯಸ್(23) ಎಂಬವರು ನಾಪತ್ತೆ ಯಾಗಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story