ಕಾರು ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು
ಕಾಪು: ಕಾರೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನ.14ರಂದು ಮಧ್ಯಾಹ್ನ ವೇಳೆ ಕೊಪ್ಪಲಂಗಡಿ ಮಸೀದಿ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಕಾಪು ಸಮೀಪದ ಕೊತಲಕಟ್ಟೆಯ ನಿವಾಸಿ ಫಾರೂಕ್ ಎಂದು ಗುರುತಿಸಲಾಗಿದೆ. ಇವರು ಕೊಪ್ಪಲಂಗಡಿ ಮಸೀದಿಯಲ್ಲಿ ನಮಾಝ್ ಮುಗಿಸಿ ಮನೆಗೆ ಹೋಗಲು ಸ್ಕೂಟರ್ನಲ್ಲಿ ಹೆದ್ದಾರಿಗೆ ಬರುತ್ತಿದ್ದಂತೆ ಉಡುಪಿ ಕಡೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ.
ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಮೃತರು ಪತ್ನಿ, ನಾಲ್ವರು ಪುತ್ರರು ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story