Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೆಳ್ಳೆ ಸೇತುವೆ: ಉಡುಪಿ ಜಿಲ್ಲಾಧಿಕಾರಿಗೆ...

ಬೆಳ್ಳೆ ಸೇತುವೆ: ಉಡುಪಿ ಜಿಲ್ಲಾಧಿಕಾರಿಗೆ ಸ್ಥಳೀಯ ಕೃಷಿಕರ ದೂರು

21 Nov 2022 7:24 PM IST
share
ಬೆಳ್ಳೆ ಸೇತುವೆ: ಉಡುಪಿ ಜಿಲ್ಲಾಧಿಕಾರಿಗೆ ಸ್ಥಳೀಯ ಕೃಷಿಕರ ದೂರು

ಉಡುಪಿ: ಪಡುಬೆಳ್ಳೆ-ಕುಂತಳನಗರ ಹೊಸ ಸಂಪರ್ಕ ರಸ್ತೆಗೆ ಬೆಳ್ಳೆಯಲ್ಲಿ ಪಾಪನಾಶಿನಿ ನದಿಗೆ ಕಟ್ಟಿರುವ ಸೇತುವೆಯ ಅವೈಜ್ಞಾನಿಕ ಕಾಮಗಾರಿ ಯಿಂದ ಮಳೆ ನೀರು ಸರಾಗ ಹರಿಯುವಿಕೆಗೆ ಅಡ್ಡಿಯಾಗಿ ಕೃಷಿ ಮತ್ತು ಜನತೆಗೆ ಆಗುತ್ತಿರುವ ತೊಂದರೆಗಳನ್ನು ಪರಿಹರಿಸುವಂತೆ ಉಡುಪಿ ಜಿಲ್ಲಾ ಕೃಷಿಕ ಸಂಘದ ನೇತೃತ್ವದಲ್ಲಿ ಸ್ಥಳೀಯ ಕೃಷಿಕರು ಕಾವಗಾರಿ ವೀಕ್ಷಣೆಗೆ ತಮ್ಮ ಮನವಿ ಮೇರೆಗೆ ಆಗಮಿಸಿದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಅಧಿಕ ಮಳೆ ಸುರಿಯುವಾಗ ವಿಸ್ತಾರವಾದ ಗದ್ದೆ ಪ್ರದೇಶಗಳಲ್ಲಿ ಸರಾಗವಾಗಿ ಹರಿದು ಹೋಗುತ್ತಿದ್ದ ಮಳೆಗಾಲದ ನೀರು ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸೇತುವೆಯ ಭಾಗದಲ್ಲಷ್ಟೇ ಹರಿಯುವಂತಾಗಿದೆ. ಇದರಿಂದಾಗಿ ಸೇತುವೆಯ ಪೂರ್ವಭಾಗದಲ್ಲಿ ಏಳು ಕಿ.ಮೀ. ಉದ್ದಕ್ಕೂ ಕೃತಕ ನೆರೆ ಸೃಷ್ಟಿಯಾಗಿ, ಕೃಷಿ ಭೂಮಿ ಮುಳುಗಡೆಯಾಗಿ ಕೃಷಿ ನಾಶವಾಗಿದೆ. ಕೆಲವೆಡೆ ಹಿನ್ನೀರಿನಿಂದಾಗಿ ಕೃಷಿಯನ್ನೇ ಸಂಪೂರ್ಣವಾಗಿ ನಿಲ್ಲಿಸುವಂತಾಗಿದೆ ಎಂದು ರೈತರು ದೂರಿದರು.

ನದಿಯ ಎರಡೂ ಮಗ್ಗುಲುಗಳ ಪಡುಬೆಳ್ಳೆ, ತಾಬೈಲು, ದೇವರಗುಡ್ಡೆ, ಗುಡ್ಡೆಟ್ಟು, ಅಂಕುದ್ರು, ಕಟ್ಟಿಂಗೇರಿ, ತರ್ಪಜಾಲು, ಗಂಗೆಲಾ, ದಿಂದೊಟ್ಟು, ಕುರುಡೈ, ಕಬೇಡಿ, ಹೊಸವಕ್ಲು, ಮಟ್ಟಾರು ಪ್ರದೇಶಗಳ ಸುಮಾರು  ಎಂಟು ನೂರು ಹೆಕ್ಟೇರು (ಎರಡು ಸಾವಿರ ಎಕರೆ) ಕೃಷಿ ಪ್ರದೇಶಗಳ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಅಧಿಕ ಮಳೆ ಸುರಿದರೆ ಹಲವೆಡೆ ಹಿನ್ನೀರಿನ ಮಟ್ಟ ಏರಿ ಹಲವರ ಮನೆ, ಆಸ್ತಿ ಮತ್ತು ಪ್ರಾಣ ಹಾನಿಯುಂಟಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತ ಮುಖಂಡರು, ಕೃಷಿಕರು ಮಳೆಗಾಲದಲ್ಲಿ ಆಗುತ್ತಿರುವ ತೊಂದರೆ, ಸಮಸ್ಯೆಗಳನ್ನು ಜಿಲ್ಲಾಧಿಕಾರಿಗೆ ವಿವರಿಸಿದರು.

ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ವೀಕ್ಷಣೆ ಮಾಡಿ ಕೃಷಿಕರ ಸಮಸ್ಯೆಗಳನ್ನು ಮನದಟ್ಟು ಮಾಡಿಕೊಂಡ ಜಿಲ್ಲಾಧಿಕಾರಿ, ಸ್ಥಳಕ್ಕೆ ಇಂಜಿನಿಯರರನ್ನು ಕರೆಸಿ, ಕೃಷಿಕರ ಮನವಿಯಂತೆ  ಮಳೆ ನೀರು ಕೃಷಿಭೂಮಿಯಲ್ಲಿ ಎಲ್ಲೂ ನಿಲ್ಲದೆ ಸರಾಗವಾಗಿ ಹರಿಯಲು ಸೇತುವೆಯ ಇಕ್ಕೆಲಗಳಲ್ಲಿ ಸ್ಪಾನ್ ಇಲ್ಲವೇ ಪೈಪು ಮತ್ತು ಚಾನಲ್ ರಚನೆ ಮಾಡಿ ಕಾಮಗಾರಿ ಮುಂದುವರಿಸಲು ನಿರ್ದೇಶ ನೀಡಿದರು.

ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು, ಕಾರ್ಯದರ್ಶಿ ರವೀಂದ್ರ ಗುಜ್ಜರಬೆಟ್ಟು, ರವಿ ಪೂಜಾರಿ ಕುರ್ಕಾಲು, ಲೂಕಾಸ್ ಡಿಸೋಜಾ ಬಡಗು ಪಂಜಿಮಾರು, ಬೆಳ್ಳೆ ಗ್ರಾಪಂ ಅಧ್ಯಕ್ಷ ಸುಧಾಕರ ಪೂಜಾರಿ, ಅಜಿತ್ ಶೆಟ್ಟಿ, ಸದಾನಂದ ಶೆಣೈ, ಅಮಿತ, ಪ್ರಮೀಳ, ಲ್ಯಾನ್ಸಿ ಲೂವಿಸ್, ಅನಿತಾ ಆಳ್ವಾ, ಜಲಜ, ಸೆಲಿನಾ, ಉದಯ ಪೂಜಾರಿ, ರೊನಾಲ್ಡ್, ಅರುಣ್ ನೊರೋನ್ಹಾ, ಜೆನ್ನಿ ಡಿಸೋಜಾ, ಅಶೋಕ್ ಶೆಟ್ಟಿ, ಸುದರ್ಶನ್ ಪ್ರಭು, ರಾಬರ್ಟ್ ಸೇರಿದಂತೆ ಅಟ್ಟಿಂಜೆ, ಸೋದೆಮಠ ಬೈಲು, ಬಡಗು ಪಂಜಿಮಾರು ಪ್ರದೇಶಗಳ ಕೃಷಿಕರು ಉಪಸ್ಥಿತರಿದ್ದರು.

share
Next Story
X