ನ.26: ಸಚಿವ ಡಾ. ಅಶ್ವಥ್ ನಾರಾಯಣ ಉಡುಪಿ ಜಿಲ್ಲಾ ಪ್ರವಾಸ
ಉಡುಪಿ, ನ.25: ರಾಜ್ಯದ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ-ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಡಾ. ಅಶ್ವಥ್ ನಾರಾಯಣ ಸಿ.ಎನ್. ಅವರು ನ.26ರಶನಿವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ನಾಳೆ ಬೆಳಗ್ಗೆ 9 ಗಂಟೆಗೆ ಕೋಟ ವಿವೇಕ ಹೈಸ್ಕೂಲ್ ಆವರಣದಲ್ಲಿ ಹೊಳಪು-2022ಜನಾಧಿಕಾರದ ಸಂಚಲನ ಕಾರ್ಯಕ್ರಮ ಹಾಗೂ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿ ಸುವ ಅವರು, 11.30ಕ್ಕೆ ಉಪ್ಪೂರು ಕೊಳಲಗಿರಿಯಲ್ಲಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ (ಜಿ.ಟಿ.ಟಿ.ಸಿ) ಭೇಟಿ ನೀಡಿದ ನಂತರ ಶಿವಮೊಗ್ಗಕ್ಕೆ ತೆರಳಲಿದ್ದಾರೆ.
Next Story