ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ
ಉಡುಪಿ, ನ.29: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಉತ್ತಮ ಆಡಳಿತ ಮಾಸ (ಗುಡ್ಗವರ್ನೆನ್ಸ್ ಮಂಥ್) 2022ರ ಅಂಗವಾಗಿ ಡಿಸೆಂಬರ್ ತಿಂಗಳಲ್ಲಿ ವಿಶೇಷ ಆನ್ಲೈನ್ ಉಪನ್ಯಾಸ, ತಜ್ಞ ಸಮಿತಿ ಯಿಂದ ಚರ್ಚೆ ಹಾಗೂ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ.
ಉತ್ತಮ ಆಡಳಿತಕ್ಕಾಗಿ ತಂತ್ರಜ್ಞಾನ ಎಂಬ ವಿಷಯದ ಕುರಿತು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಏರ್ಪಡಿಸಲಾಗಿದ್ದು, ಡಿಸೆಂಬರ್ 15ರೊಳಗೆ ಪದವಿಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು 500 ಪದಗಳಿಗೆ ಮೀರದಂತೆ ಪ್ರಬಂಧ ಬರೆದು ಇ-ಮೇಲ್: -essay.ksta@gmail.com-ಗೆ ಕಳುಹಿಸಬಹುದು ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story