ಬಿಜೆಪಿ ಬಿಹಾರ ರಾಜ್ಯಾಧ್ಯಕ್ಷರಿಂದ ಉಡುಪಿ ಭೇಟಿ
ಉಡುಪಿ, ನ.29: ಬಿಜೆಪಿಯ ಬಿಹಾರ ರಾಜ್ಯಾಧ್ಯಕ್ಷ ಹಾಗೂ ಸಂಸದ ಡಾ. ಸಂಜಯ್ ಜೈಸ್ವಾಲ್ ಇಂದು ಉಡುಪಿಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರನ್ನು ಜಿಲ್ಲಾ ಬಿಜೆಪಿ ವತಿಯಿಂದ ಮಣಿಪಾಲದ ಹೋಟೆಲ್ ನಲ್ಲಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಾಯಕ ಸತ್ಯಾನಂದ ನಾಯಕ್ ಆತ್ರಾಡಿ, ಮಾಧ್ಯಮ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಹಾಗೂ ವಿಹಿಂಪ ಮಹಿಳಾ ಪ್ರಮುಖ್ ಪೂರ್ಣಿಮಾ ಸುರೇಶ್ ನಾಯಕ್ ಉಪಸ್ಥಿತರಿದ್ದರು.
Next Story