ಪಣಿಯೂರು: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
ಕಾಪು: ಮನೆಯ ಹಿಂಬಾಗಿಲಿನ ಬಾಗಿಲು ಮುರಿದು ಒಳ ಪ್ರವೇಶಿಸಿದ ಕಳ್ಳರು ಸುಮಾರು 15 ಲಕ್ಷ ರೂ. ಮೌಲ್ಯದ ಚಿನ್ನ ಬೆಳ್ಳಿ ಮತ್ತು ವಜ್ರಾಭರಣಗಳನ್ನು ಕದ್ದೊಯ್ದ ಘಟನೆ ಪಣಿಯೂರಿನಲ್ಲಿ ವರದಿಯಾಗಿದೆ.
ರವಿವಾರ ಮಧ್ಯರಾತ್ರಿಯ ಬಳಿಕ ಕಳ್ಳತನ ನಡೆದಿದ್ದು ಸೋಮವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಮುಲ್ಕಿ ವಿಜಯ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ರಘುರಾಮ್ ರಾವ್ ಅವರ ಪಣಿಯೂರಿನ ಮನೆಯಲ್ಲಿ ಘಟನೆ ನಡೆದಿದೆ
ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Next Story