Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರದಲ್ಲಿ ಹೆಚ್ಚುತ್ತಿರುವ ಚಿರತೆಗಳ...

ಕುಂದಾಪುರದಲ್ಲಿ ಹೆಚ್ಚುತ್ತಿರುವ ಚಿರತೆಗಳ ಓಡಾಟ: ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

23 Jan 2023 7:09 PM IST
share
ಕುಂದಾಪುರದಲ್ಲಿ ಹೆಚ್ಚುತ್ತಿರುವ ಚಿರತೆಗಳ ಓಡಾಟ: ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

ಕುಂದಾಪುರ: ಇತ್ತೀಚಿನ ಕೆಲ ವರ್ಷಗಳಲ್ಲಿ ಕುಂದಾಪುರ ತಾಲೂಕಿನ ಹಲವೆಡೆ ಚಿರತೆಗಳ ಓಡಾಟ ಹೆಚ್ಚುತ್ತಿದೆ. ಇದೀಗ ಅವುಗಳು ಆಹಾರ ಅರಸಿಕೊಂಡು ಜನವಸತಿ ಪ್ರದೇಶಕ್ಕೂ ಹೆಜ್ಜೆ ಹಾಕುತ್ತಿದ್ದು, ಇದರಿಂದ ಗ್ರಾಮಸ್ಥರು  ತೀವ್ರ ಆತಂಕಕ್ಕೆ ಒಳಗಾಗುತ್ತಿದ್ದಾರೆ.

ಚಿರತೆಯು ಆಹಾರ ವರಸಿ ಜನವಸತಿ ಪ್ರದೇಶದತ್ತ ಬರುವುದು, ಸಾಕು ಪ್ರಾಣಿಗಳನ್ನು ಕೊಂಡೊಯ್ಯುವುದು, ಬಾವಿ-ಕೆರೆಗೆ ಬಿದ್ದು ತಮ್ಮ ಜೀವದೊಂದಿಗೆ ಸೆಣೆಸಾಡುವ ಜೊತೆಗೆ ಜನರ ಕಣ್ಣಿಗೆ ಕಾಣಿಸಿಕೊಂಡು ಆತಂಕ ಹುಟ್ಟಿಸುತ್ತಿದೆ. ಮನೆಯ ನಾಯಿ, ಜಾನುವಾರು ಸಹಿತ ಸಾಕು ಪ್ರಾಣಿಗಳು ಹಲವಾರು ಅಲ್ಲಲ್ಲಿ ಚಿರತೆ ದಾಳಿಗೆ ಬಲಿಯಾಗುತ್ತಿವೆ.

ಸಂಜೆ ಹಾಗೂ ರಾತ್ರಿ ಹೊತ್ತು ಕೆಲಸ ಮುಗಿಸಿ ಹೋಗುವ ಅದೆಷ್ಟೋ ಮಂದಿಗೆ ಚಿರತೆ ಪ್ರತ್ಯಕ್ಷವಾಗುತ್ತಿದೆ. ಚಿರತೆ ಓಡಾಟದಿಂದ ನಾಯಿಗಳು ಕೂಗಿ ರಾತ್ರಿಯಿಡೀ ನಿದ್ದೆ ಬಿಟ್ಟವರು ಹಲವರು. ಮತ್ತೆ ಕೆಲವೆಡೆ ಜನರು ಚಿರತೆ ಭೀತಿಯಿಂದ ಸಂಜೆ ಆಗುವ ಮೊದಲೆ ಮನೆ ಸೇರುತ್ತಿದ್ದಾರೆ.

ನಿರಂತರ ಚಿರತೆ ಕಾಟ: ತಾಲೂಕಿನ ತೆಕ್ಕಟ್ಟೆ ಸಮೀಪದ ಮಾಲಾಡಿ ತೋಪಿನಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಚಿರತೆಯು ನಾಯಿ, ಜಾನುವಾರು ಸೇರಿದಂತೆ ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದೆ. ಹಗಲು-ರಾತ್ರಿಯೆನ್ನದೆ ಆಗ್ಗಾಗೆ ಪ್ರತ್ಯಕ್ಷವಾಗಿ ಜನರಲ್ಲಿ ಭೀತಿ ಸೃಷ್ಟಿಸುತ್ತಿದೆ.

ಕಳೆದ ಒಂದು ವಾರದಿಂದ ಹಲವು ಸಾಕು ನಾಯಿಗಳು ಚಿರತೆ ದಾಳಿಗೆ ಬಲಿಯಾಗಿವೆ. ಈ ತೋಟದಲ್ಲಿ 2018 ಆಗಸ್ಟ್ ತಿಂಗಳಲ್ಲಿ ಮೊದಲ್ಗೊಂಡು 2022 ಅ.2 ತನಕ ಆರು ಚಿರತೆಗಳು ಸೆರೆಯಾಗಿವೆ. ಈ ಭಾಗದಲ್ಲಿ ಜನವಸತಿ, ಶಾಲೆ, ಅಂಗನವಾಡಿ, ದೇವಸ್ಥಾನವಿದ್ದು ದಿನೇದಿನೇ ಚಿರತೆ ಇಲ್ಲಿ ಪ್ರತ್ಯಕ್ಷವಾಗುತ್ತಿರುವುದು ಜನರನ್ನು ಆತಂಕಕ್ಕೀಡು ಮಾಡಿದೆ. ಈ ಬಗ್ಗೆ ಸ್ಪಂದಿಸಿದ ಇಲಾಖೆ ಜ.20ರಂದು ಚಿರತೆ ಸೆರೆಗಾಗಿ ಬೋನಿಟ್ಟಿದೆ.

ಅದೇ ರೀತಿ ಕುಂದಾಪುರ ವಲಯ ಅರಣ್ಯ ವ್ಯಾಪ್ತಿಯ ನಾಡ, ಆಲೂರು, ಗುಲ್ವಾಡಿ, ವಕ್ವಾಡಿ, ಕಾಳಾವರ, ಕೊರ್ಗಿ, ಕೆದೂರು, ಅಸೋಡು, ಅಂಪಾರು, ಗುಲ್ವಾಡಿ ಗ್ರಾಮದ ಮಾವಿನಕಟ್ಟೆ ಕೆತ್ತಿಮಕ್ಕಿ, ತೆಕ್ಕಟ್ಟೆಯ ಮಾಲಾಡಿ, ಹಾಗೂ ಕುಂದಬಾರಂದಾಡಿ ಎಂಬಲ್ಲಿಯೂ ಚಿರತೆಗಳು ನಾಡಿಗೆ ಬರುತ್ತಿದ್ದು, ಸಾಕಷ್ಟು ಚಿರತೆಗಳನ್ನು ಇಲ್ಲಿ ಅರಣ್ಯ ಇಲಾಖೆಯವರು ರಕ್ಷಿಸಿದ್ದಾರೆ.

ಕಳೆದ 4-5 ವರ್ಷಗಳಿಂದ ನಿರಂತರವಾಗಿ ಚಿರತೆ ಕಾಟವಿದೆ. ರಾತ್ರಿ- ಹಗಲೆನ್ನದೆ ಪ್ರತ್ಯಕ್ಷವಾಗುವ ಚಿರತೆ ಜನರ ನಿದ್ದೆಗೆಡಿಸಿದೆ. ನಾಯಿ ಸಹಿತ ಸಾಕು ಪ್ರಾಣಿಗಳು ಚಿರತೆಗೆ ಬಲಿಯಾಗಿವೆ. ಅರಣ್ಯ ಇಲಾಖೆ ಚಿರತೆ ಸೆರೆಗೆ ಸ್ಪಂದಿಸುತ್ತಿದೆ. ಆದರೂ ಕೂಡ ಚಿರತೆ ಉಪಟಳ ತಪ್ಪಿಲ್ಲ. ಮಾಲಾಡಿ ತೋಪಿ ನಲ್ಲಿಯೇ 5 ವರ್ಷದಲ್ಲಿ 6 ಚಿರತೆ ಸೆರೆ ಹಿಡಿಯಲಾಗಿದೆ. 2022ರಲ್ಲಿ ಎರಡು ಚಿರತೆ ಬೋನಿಗೆ ಬಿದ್ದಿದೆ. ಗುರುವಾರ ರಾತ್ರಿ ತನಕವೂ ಚಿರತೆ ಕಾಟ ಹಾಗೆಯೇ ಇದೆ.
-ಸತೀಶ್ ದೇವಾಡಿಗ, ಮಾಲಾಡಿ ಗ್ರಾಮಸ್ಥರು

ಕುಂದಾಪುರ ವಲಯ ಅರಣ್ಯ ವ್ಯಾಪ್ತಿಯ ಹಲವಾರು ಕಡೆ ಚಿರತೆ ಓಡಾಟದ ಬಗ್ಗೆ ದೂರುಗಳು ಬರುತ್ತಿವೆ. ಗುಲ್ವಾಡಿ ಗ್ರಾಮದ ಮಾವಿನಕಟ್ಟೆ ಕೆತ್ತಿಮಕ್ಕಿ ಎಂಬಲ್ಲಿ  ವಾರಗಳ ಹಿಂದೆ ಅರಣ್ಯ ಇಲಾಖೆಯಿಟ್ಟ ಬೋನಿನಲ್ಲಿ ಗುರುವಾರ ಚಿರತೆ ಸೆರೆಯಾಗಿದೆ. ಉಳಿದಂತೆ 3 ತಿಂಗಳ ವ್ಯಾಪ್ತಿಯಲ್ಲಿ ತೆಕ್ಕಟ್ಟೆಯ ಮಾಲಾಡಿ, ಹಾಗೂ ಕುಂದಬಾರಂದಾಡಿ ಎಂಬಲ್ಲಿ ಚಿರತೆಯನ್ನು ಸೆರೆಹಿಡಿಯಲಾಗಿದೆ. ಸೆರೆಯಾದ ಚಿರತೆಗಳನ್ನು ರಕ್ಷಿತಾರಣ್ಯಕ್ಕೆ ಬಿಡುವ ಕಾರ್ಯ ಅರಣ್ಯ ಇಲಾಖೆ ಮಾಡುತ್ತಿದೆ. ಮಾಲಾಡಿಯಲ್ಲಿ ಮತ್ತೆ ಚಿರತೆ ಓಡಾಟದ ಬಗ್ಗೆ ಸಾರ್ವಜನಿಕರು ದೂರು ನೀಡಿದ್ದು ಬೋನು ಇಡಲಾಗಿದೆ.
- ಕಿರಣ್ ಬಾಬು, ಕುಂದಾಪುರ ವಲಯ ಅರಣ್ಯಾಧಿಕಾರಿ

share
Next Story
X