Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅನ್ಯರಾಜ್ಯ ಇಲಾಖಾ ಮಟ್ಟದಲ್ಲಿ ಸಮನ್ವಯ...

ಅನ್ಯರಾಜ್ಯ ಇಲಾಖಾ ಮಟ್ಟದಲ್ಲಿ ಸಮನ್ವಯ ಸಭೆಗೆ ನಿರ್ಣಯ: ಕರಾವಳಿ ಕಾವಲು ಪೊಲೀಸರಿಂದ ಮೀನುಗಾರ ಮುಖಂಡರ ಸಭೆ

28 Jan 2023 8:30 PM IST
share
ಅನ್ಯರಾಜ್ಯ ಇಲಾಖಾ ಮಟ್ಟದಲ್ಲಿ ಸಮನ್ವಯ ಸಭೆಗೆ ನಿರ್ಣಯ: ಕರಾವಳಿ ಕಾವಲು ಪೊಲೀಸರಿಂದ ಮೀನುಗಾರ ಮುಖಂಡರ ಸಭೆ

ಮಲ್ಪೆ: ಮಲ್ಪೆ ಕರಾವಳಿ ಕಾವಲು ಪೊಲೀಸ್ ಇದರ ಕೇಂದ್ರ ಕಛೇರಿಯಲ್ಲಿ ಉಡುಪಿ ಜಿಲ್ಲಾ ಮೀನುಗಾರ ಮುಖಂಡರ ಸಭೆ ಕರಾವಳಿ ಕಾವಲು ಪೊಲೀಸ್ ಎಸ್ಪಿ ಅಬ್ದುಲ್ ಅಹದ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರಗಿತು.

ಮಲ್ಪೆ ಮೀನುಗಾರರ ಸಂಘ ಅಧ್ಯಕ್ಷ ದಯಾನಂದ ಸುವರ್ಣ ಅಂತರ್ ರಾಜ್ಯಗಳಲ್ಲಿ ಮೀನುಗಾರಿಕೆ ಮಾಡುವ ಸಮಯ ಆಗುವ ತೊಂದರೆಗಳ ಬಗ್ಗೆ ರಾಜ್ಯಮಟ್ಟದ ಮೀನುಗಾರರ ಸಮನ್ವಯ ಸಭೆ ನಡೆಸುವಂತೆ ಕೋರಿದರು.  ಅನ್ಯರಾಜ್ಯದ ಮೀನುಗಾರಿಕೆ ಇಲಾಖೆಯು ಕರ್ನಾಟಕದ ಬೋಟುಗಳಿಗೆ ಹೆಚ್ಚಿನ ಮೊತ್ತದ ದಂಡ ವಿಧಿಸುತ್ತಿದೆ. ತಾಂತ್ರಿಕ ಸಮಸ್ಯೆ, ಆರೋಗ್ಯ ಸಮಸ್ಯೆ ಮತ್ತು ನೈಸರ್ಗಿಕ ವಿಕೋಪದ ಸಮಯದಲ್ಲಿ ಅಲ್ಲಿಯ ಬಂದರು ಒಳಗಡೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲವೆಂಬುದಾಗಿ ಆರೋಪಿಸಿದರು.

ಅನ್ಯ ರಾಜ್ಯಗಳ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಮೀನುಗಾರಿಕಾ ಮುಖಂಡರೊಂದಿಗೆ ಸಮನ್ವಯ ಸಭೆಯನ್ನು ನಡೆಸಬೇಕೆಂದು ಮೀನುಗಾರರು ಇದೇ ಸಂದರ್ಭದಲ್ಲಿ ವಿನಂತಿಸಿದರು. ಅಲ್ಲದೇ ಈ ಬಗ್ಗೆ ಅನ್ಯರಾಜ್ಯದ ಇಲಾಖೆ ಮಟ್ಟದಲ್ಲಿ ಮೀನುಗಾರಿಕಾ ಮುಖಂಡರ ಸಮನ್ವಯ ಸಭೆಯನ್ನು ನಡೆಸುವ ಬಗ್ಗೆ ಮೇಲಾಧಿಕಾರಿಗಳಿಗೆ ಪತ್ರ ಬರೆಯುವ ಬಗ್ಗೆ ಸಭೆಯಲ್ಲಿ ನಿರ್ಣಯಿಸ ಲಾಯಿತು.

ಮೀನುಗಾರಿಕಾ ಬೋಟಿನಲ್ಲಿ ಮೀನುಗಾರರು ತ್ಯಾಜ್ಯವನ್ನು ಸಮುದ್ರಕ್ಕೆ ಎಸೆಯುತ್ತಿದ್ದು, ಇದರ ಸೂಕ್ತ ವಿಲೇವಾರಿ ಮಾಡುವ ಬಗ್ಗೆ ಮೀನುಗಾರಿಕೆ ಸಂಘಟನೆಯವರು ಸ್ಥಳೀಯ ನಗರಸಭೆಗೆ ತಿಳಿಸಿ ತ್ಯಾಜ್ಯ ಸಂಗ್ರಹ ತೊಟ್ಟಿಗಳನ್ನು ಇಡುವ ಬಗ್ಗೆ ನಿರ್ಣಯಿಸಲಾಯಿತು. ಸಂಶಯಿತ ಹಾಗೂ ಅನುಮಾಸ್ಪದ ಬೋಟುಗಳ ಬಗ್ಗೆ ಮಾಹಿತಿ ನೀಡಿದವರಿಗೆ ಮತ್ತು ಸಮುದ್ರದಲ್ಲಿ ಜೀವರಕ್ಷಣೆ ಮಾಡಿದ ಮೀನುಗಾರರಿಗೆ ಸನ್ಮಾನ ಮಾಡುವ ಬಗ್ಗೆ ಚರ್ಚಿಸಲಾಯಿತು.

20 ಮೀಟರ್ ಉದ್ದಕ್ಕಿಂತ ಮೇಲ್ಪಟ್ಟ ಮೀನುಗಾರಿಕಾ ಬೋಟುಗಳಿಗೆ ಕಡ್ಡಾಯವಾಗಿ ಎ.ಐ.ಎಸ್.(ಚೈನಾ ಸೆಟ್ ಹೊರತುಪಡಿಸಿ) ಅಳವಡಿಸುವ ಬಗ್ಗೆ ಮತ್ತು ಎಲ್ಲಾ ಮೀನುಗಾರಿಕೆ ಬೋಟುಗಳಲ್ಲಿ ಕಡ್ಡಾಯವಾಗಿ ಜೀವ ರಕ್ಷಕ ಸಲಕರಣಿಗಳನ್ನು ಇಟ್ಟುಕೊಳ್ಳಬೇಕು ಮತ್ತು ಮೀನುಗಾರಿಕೆ ಸಮಯದಲ್ಲಿ ಲೈಫ್ ಜಾಕೆಟ್ ಧರಿಸುವ ಬಗ್ಗೆ ಸಭೆಯಲ್ಲಿ ತಿಳಿಸಲಾಯಿತು. ಮೀನುಗಾರಿಕೆ ಸಮಯ ದಲ್ಲಿ ಯಾವುದೇ ಅನಾಹುತ ಸಂಭವಿಸಿದರೆ ಸಿಎಸ್‌ಪಿ ಕಂಟ್ರೋಲ್ ರೂಂನ ’1093’ ಟೋಲ್ ಫ್ರೀ ನಂಬರ್‌ಗೆ ಮಾಹಿತಿ ನೀಡುವಂತೆ ಸೂಚಿಸಲಾಯಿತು.

ಆರೋಗ್ಯ ಇಲಾಖೆಯ ಡಾ. ಲತಾ ನಾಯಕ್, ಡಾ. ತೇಜಸ್ವಿ ಆಯುಷ್ಮಾನ್ ಭಾರತ್ ಯೋಜನೆ ಹಾಗೂ ಶರತ್ ರಾಜು ಯಶಸ್ವಿನಿ ಯೋಜನೆ ಹಾಗೂ ಅಂಚೆ ಇಲಾಖಾ ಅಧಿಕಾರಿ ಪೂರ್ಣಿಮಾ ಜನಾರ್ದನ ಹಾಗೂ ನಿಕಿಲ್ ರಾಜು ಫೋಸ್ಟಲ್ ಲೈಫ್ ಇನ್ಸೂರೆನ್ಸ್ ಕುರಿತು ಮಾಹಿತಿ ತಿಳಿಸಿದರು. ಅಗ್ನಿಶಾಮಕ ದಳದ ಪರವಾಗಿ ಫಯರ್‌ಮೆನ್ ಗಣೇಶ್ ಆಚಾರ್ ಬೋಟಿನಲ್ಲಿ ಯಾವ ವಿಧದ ಫಯರ್ ನಿಯಂತ್ರಣ ಸಲಕರಣೆಗಳನ್ನು ಅಳವಡಿಸಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಮೀನುಗಾರ ಮುಖಂಡರಾದ ಯಶಪಾಲ್ ಸುವರ್ಣ, ರವಿರಾಜ್ ಸುವರ್ಣ, ನಾಗರಾಜ್ ಸುವರ್ಣ, ಸುಭಾಶ ಎಸ್.ಮೆಂಡನ್, ಹರಿಶ್ಚಂದ್ರ ಕಾಂಚನ್, ವಿಕ್ರಂ ಸಾಲ್ಯಾನ್, ಪಾಂಡುರಂಗ ಕೋಟ್ಯಾನ್, ಸಂತೋಷ್ ಸಾಲ್ಯಾನ್, ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಯ ಗುತ್ತಿಗೆದಾರ ಸುದೇಶ್ ಶೆಟ್ಟಿ, ನುರಿತ ಜೀವರಕ್ಷಕ ಈಶ್ವರ ಮಲ್ಪೆ ಹಾಜರಿದ್ದರು. ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಭಾಸ್ಕರ ಶೆಟ್ಟಿಗಾರ್ ವಂದಿಸಿದರು.

share
Next Story
X