ಉಡುಪಿ: ಫೆ.7ರಂದು ಮುಸ್ಲಿಮ್ ವೆಲ್ಫೇರ್ನಿಂದ ರಕ್ತದಾನ ಶಿಬಿರ
ಉಡುಪಿ: ಉಡುಪಿ ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ಮತ್ತು ಮಣಿಪಾಲ ಕೆಎಂಸಿಯ ಬ್ಲಡ್ಬ್ಯಾಂಕ್ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಫೆ.7ರಂದು ಬೆಳಗ್ಗೆ 10.30ಕ್ಕೆ ಉಡುಪಿ ಜಾಮೀಯ ಮಸೀದಿಯ ನೆಲಮಾಳಿಗೆಯಲ್ಲಿ ಏರ್ಪಡಿಸಲಾಗಿದೆ.
ಮುಖ್ಯ ಅತಿಥಿಗಳಾಗಿ ಐಎಂಎ ಉಡುಪಿ ಕರಾವಳಿ ಶಾಖೆಯ ಅಧ್ಯಕ್ಷ ಡಾ.ಪಿ.ವಿ.ಭಂಡಾರಿ, ಕೆಎಂಸಿ ಬ್ಲಡ್ ಬ್ಯಾಂಕಿನ ಪ್ರೋಫೆಸರ್ ಮತ್ತು ವಿಭಾಗ ಮುಖ್ಯಸ್ಥೆ ಡಾ. ಶಮೀ ಶಾಸ್ತ್ರೀ, ಮಸ್ಜೀದ್ ಎ ಮಣಿಪಾಲ ಅಧ್ಯಕ್ಷ ಹಾಜಿ ಕೆ. ಅಬ್ದುಲ್ಲಾ ಪರ್ಕಳ, ಉಡುಪಿ ಮಸೀದಿ ಅಧ್ಯಕ್ಷ ಮುಹಮ್ಮದ್ ಅರ್ಶಾದ್ ಭಾಗವಹಿಸಲಿರುವರು ಎಂದು ಅಸೋಸಿಯೇಶನ್ ಅಧ್ಯಕ್ಷ ಕಲ್ಯಾಣಪುರ ಅಬ್ದುಲ್ ಗಫೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story