ಸ್ವಚ್ಛತೆಗೆ ಮಾದರಿಯಾದ ಉಡುಪಿ ಜಿಲ್ಲಾಧಿಕಾರಿ ವಸತಿಗೃಹದಲ್ಲಿ ವಿನೂತನ ಕಾಂಪೋಸ್ಟ್ ಬೆಡ್ ನಿರ್ಮಾಣ
-

ಉಡುಪಿ: ತ್ಯಾಜ್ಯ ವಿಲೇವಾರಿಯಲ್ಲಿ ರಾಜ್ಯಕ್ಕೆ ಮಾದರಿಯಾಗು ವಂತಹ ಯೋಜನೆಗಳನ್ನು ರೂಪಿಸಿ, ಅವುಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುತ್ತಿರುವ ಜಿಲ್ಲೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಉಡುಪಿ ಜಿಲ್ಲೆ ಯಲ್ಲಿ ಪ್ರಸ್ತುತ ಮತ್ತೊಂದು ನೂತನ ಸ್ವಚ್ಛತಾ ಕಾರ್ಯಕ್ರಮದ ಪ್ರಾಯೋಗಿಕ ಯೋಜನೆಗೆ ಜಿಲ್ಲಾಧಿಕಾರಿಗಳ ವಸತಿಗೃಹ ಸಾಕ್ಷಿಯಾಗಿದೆ.
ಅಜ್ಜರಕಾಡಿನಲ್ಲಿರುವ ಜಿಲ್ಲಾಧಿಕಾರಿಗಳ ಮನೆಯ ಕಾಂಪೌಂಡ್ನಲ್ಲಿ ಬೀಳುವ ಒಣಕಸವನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಣೆ ಮಾಡುವ ವಿಧಾನವನ್ನು ಉಡುಪಿ ಜಿಲ್ಲಾಧಿಕಾರಿಗಳ ವಸತಿಗೃಹದಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ ಮಾಡಿದ್ದು, ವಸತಿಗೃಹದ ಕೈತೋಟದ ಒಣ ಹುಲ್ಲು, ತೋಟದ ಗಿಡಗಳಿಂದ ಬಿದ್ದ ಗಿಡದ ಎಲೆಗಳು, ಮರದ ಮೇಲಿಂದ ಬಿದ್ದ ಒಣ ಎಲೆಗಳನ್ನು ಒಟ್ಟುಗೂಡಿಸಿ ‘ಡ್ರೈ ಲೀವ್ಸ್ ಕಂಪೋಸ್ಟ್ ಬೆಡ್’ ನಿರ್ಮಾಣ ಮಾಡಲಾಗಿದೆ.
ಕಾಂಪೌಂಡ್ನಲ್ಲಿ ಸಂಗ್ರಹಿಸಲಾದ ಎಲೆ ಮತ್ತು ಹುಲ್ಲನ್ನು ಸೆಗಣಿಯೊಂದಿಗೆ ಮಿಶ್ರಣ ಮಾಡಿ, 10x6 ಅಳತೆಯ ಬೆಡ್ ಮಾದರಿಯಲ್ಲಿ ಜೋಡಿಸ ಲಾಗಿದ್ದು, ಗೋಣಿಚೀಲದ ಹೊದಿಕೆ ಹಾಕಲಾಗಿದೆ. ಪ್ರತಿದಿನ ಈ ಬೆಡ್ ಮೇಲೆ ನೀರಿನ ಸಿಂಪಡಣೆ ಮಾಡಬೇಕಿದ್ದು, ಇದು 45 ದಿನಗಳ ಬಳಿಕ ಅತ್ಯುತ್ತಮ ಸಾವಯವ ಗೊಬ್ಬರವಾಗಿ ಪರಿವರ್ತನೆಗೊಳ್ಳುತ್ತದೆ. ಇದನ್ನು ಕೈ ತೋಟದಲ್ಲಿನ ಗಿಡಗಳಿಗೆ ಬಳಸಬಹುದು ಅಥವಾ ಅದೇ ಗೊಬ್ಬರದ ಬೆಡ್ ನಲ್ಲಿ ಬೀಜಗಳನ್ನು ನೆಡುವ ಮೂಲಕ ಗಿಡಗಳನ್ನು ಬೆಳಸಲು ಸಾದ್ಯವಾಗಲಿದೆ. ಎಲ್ಲದಕ್ಕೂ ಮುಖ್ಯವಾಗಿ ಮನೆಯ ಆವರಣವು ಕಸದಿಂದ ಮುಕ್ತವಾಗಿ ಸ್ವಚ್ಛತೆಯಿಂದ ಕಂಗೊಳಿಸುತ್ತದೆ.
ಈಗಾಗಲೇ ಜಿಲ್ಲಾಧಿಕಾರಿಗಳ ವಸತಿಗೃಹದಲ್ಲಿ ಹಸಿ ಕಸ ನಿರ್ವಹಣೆಗೆ ಡ್ರಮ್ ಕಾಂಪೋಸ್ಟ್ ವಿಧಾನವನ್ನು ಅಳವಡಿಸಿಕೊಂಡಿದ್ದು, ಪ್ರಸ್ತುತ ಒಣ ಕಸ ನಿರ್ವಹಣೆ ಸಹ ಯಶಸ್ವಿಯಾಗಿ ಅನುಷ್ಠಾನಗೊಳ್ಳುವ ಮೂಲಕ ಮಾದರಿ ವಸತಿಗೃಹವಾಗಿ ಪರಿವರ್ತನೆಯಾಗಿದೆ.
ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಅವರ ನಿರ್ದೇಶನದ ಮೇರೆಗೆ ಉಡುಪಿ ಜಿಲ್ಲಾಧಿಕಾರಿ ನಿವಾಸದ ಕೈ ತೋಟದಲ್ಲಿ ಎಸ್ಎಲ್ಆರ್ಎಂನ ಸ್ವಚ್ಛತಾ ಕಾರ್ಯಕರ್ತರು ಈ ನೂತನ ಕಂಪೋಸ್ಟ್ ಬೆಡ್ ನಿರ್ಮಾಣ ಮಾಡಿದ್ದಾರೆ. ಈ ಮಾದರಿ ಬಗ್ಗೆ ಎಸ್ಎಲ್ಆರ್ಎಂನ ಸ್ವಚ್ಛತಾ ಕಾರ್ಯಕರ್ತರು ವೆಲ್ಲೂರು ಶ್ರೀನಿವಾಸನ್ ಇವರಿಂದ ತರಬೇತಿ ಪಡೆದಿದ್ದರು. ಸ್ವಚ್ಛ ಭಾರತ್ ಮಿಷನ್ (ಗ್ರಾ) ಜಿಲ್ಲಾ ಸಮಾಲೋಚಕರಾದ ರಘುನಾಥ್ ಇದಕ್ಕೆ ಮಾರ್ಗದರ್ಶನ ನೀಡಿದ್ದಾರೆ.
ಮನೆಯ ಆವರಣದಲ್ಲಿ ಬೀಳುತಿದ್ದ ಒಣಕಸವನ್ನು ಸಂಪನ್ಮೂಲವಾಗಿ ಬಳಕೆ ಮಾಡಬಹುದು ಎಂಬುದಕ್ಕೆ ‘ಡ್ರೈ ಲೀವ್ಸ್ ಕಂಪೋಸ್ಟ್ ಬೆಡ್’ ಮಾದರಿ ಯಾಗಿದೆ. ಸಾರ್ವಜನಿಕರೂ ಸಹ ತಮ್ಮ ಮನೆಗಳ ಕಾಂಪೌಂಡ್ನಲ್ಲಿ ಬೀಳುವ ಒಣಕಸವನ್ನು ಸುಡುವುದು ಅಥವಾ ಬಿಸಾಡುವುದು ಮಾಡದೇ ಈ ರೀತಿಯಾಗಿ ವ್ಯವಸ್ಥಿತವಾಗಿ ಮರು ಬಳಕೆ ಮಾಡಿಕೊಳ್ಳಬಹುದಾಗಿದೆ.
ಕೂರ್ಮಾರಾವ್ ಎಂ., ಉಡುಪಿ ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ಈಗಾಗಲೇ ಹಲವು ವಿಧಾನಗಳ ಮೂಲಕ ಸಮರ್ಪಕವಾಗಿ ವಿಲೇವಾರಿ ಮಾಡಲಾಗುತ್ತಿದ್ದು, ನೂತನ ಡ್ರೈ ಲೀವ್ಸ್ ಕಂಪೋಸ್ಟ್ ಬೆಡ್ ಮಾದರಿಯನ್ನು ಸರಕಾರಿ ಅಧಿಕಾರಿಗಳ ಮನೆಯಲ್ಲಿಯೇ ಪ್ರಾಯೋಗಿಕವಾಗಿ ಅಳವಡಿಸಿಕೊಂಡು ಸಾರ್ವಜನಿಕರಿಗೆ ಪ್ರೇರಣೆ ನೀಡಬೇಕು ಎನ್ನುವ ಉದ್ದೇಶದಿಂದ, ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಅವರ ವಸತಿಗೃಹದಲ್ಲೇ ಪ್ರಥಮವಾಗಿ ಅಳವಡಿಸಲಾಗಿದೆ. ಮುಂದುವರೆದು ಈ ಮಾದರಿಯನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್, ಪ್ರಾಥಮಿಕ ಅರೋಗ್ಯ ಕೇಂದ್ರಗಳು ಸೇರಿದಂತೆ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಅಳವಡಿಸುವ ಚಿಂತನೆ ಇದೆ. ಸಾರ್ವಜನಿಕರಿಗೂ ತ್ಯಾಜ್ಯವನ್ನು ಸಂಪನ್ಮೂಲ ವಾಗಿ ಪರಿವರ್ತಿಸುವ ಬಗ್ಗೆ ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ಜಿಲ್ಲೆಯ ಎಸ್ಎಲ್ಆರ್ಎಂನ ಸ್ವಚ್ಛತಾ ಕಾರ್ಯಕರ್ತರ ನೆರವು ಪಡೆಯಬಹುದು.
ಪ್ರಸನ್ನ ಹೆಚ್., ಉಡುಪಿ ಜಿಪಂನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ.


‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.