ಮೂಡುಬಿದಿರೆ| ಟಿಪ್ಪರ್ ಚಲಾಯಿಸಿ ವ್ಯಕ್ತಿಯ ಕೊಲೆ ಪ್ರಕರಣ: ಆರೋಪಿಯ ಬಂಧನ
ಮೂಡುಬಿದಿರೆ: ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ ನಿಧಾನವಾಗಿ ಹೋಗೆಂದು ಹೇಳಿದ ವ್ಯಕ್ತಿಯ ತಲೆಯ ಮೇಲೆ ರಾಡ್ ನಿಂದ ಹೊಡೆದು ಬಿದ್ದ ನಂತರ ಆತನ ಮೇಲೆ ಟಿಪ್ಪರ್ ಚಲಾಯಿಸಿ ಕೊಲೆ ಮಾಡಿರುವ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಸೋಮವಾರ ಉಲಾಯಿಬೆಟ್ಟುವಿನಲ್ಲಿ ಬಂಧಿಸಿದ್ದಾರೆ.
ಕೋಟೆಬಾಗಿಲು ನಿವಾಸಿ, ಟಿಪ್ಪರ್ ಚಾಲಕ ಆರೀಸ್ ಕೊಲೆ ಮಾಡಿ ಬಂಧಿತನಾಗಿರುವ ವ್ಯಕ್ತಿ. ಈತ ಕಳೆದ ಶುಕ್ರವಾರದಂದು ಕೋಟೆಬಾಗಿಲಿನ ನಿವಾಸಿ ಫಯಾಝ್ (61) ಎಂಬವರ ಮೇಲೆ ಟಿಪ್ಪರ್ ಹಾಯಿಸಿ ಕೊಲೆ ಮಾಡಿ ನಂತರ ತಲೆ ಮರೆಸಿಕೊಂಡಿದ್ದ. ತಲೆ ಮರೆಸಿಕೊಂಡಿದ್ದ ಟಿಪ್ಪರ್ ಚಾಲಕ ಆರೀಸ್ ನನ್ನು ಸೆರೆ ಹಿಡಿಯಲು ಪೊಲೀಸರು ಮೂರು ತಂಡಗಳನ್ನು ರಚಿಸಿ ಬಲೆ ಬೀಸಿದ್ದರು. ಮೂರು ದಿನಗಳ ನಂತರ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗೆ ನ್ಯಾಯಾಲಯವು ೧೪ ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಇದನ್ನೂ ಓದಿ: ಟಿಪ್ಪರ್ ಲಾರಿ ಹರಿಸಿ ವ್ಯಕ್ತಿಯ ಕೊಲೆ: ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲು
Next Story