ಪಡುಬಿದ್ರಿ: ರಸ್ತೆ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಪಡುಬಿದ್ರಿ: ಟಿಪ್ಪರ್ ಹಾಗೂ ಮಹೀಂದ್ರ ಪಿಕ್ ಅಪ್ ಹಿಂಭಾಗ ಮತ್ತು ಅಲ್ಲೇ ಇದ್ದ ಸ್ಕೂಟರ್ಗೆ ಢಿಕ್ಕಿಯಾದ ಪರಿಣಾಮವಾಗಿ ಸ್ಕೂಟರ್ ಸವಾರ ಸವಾರ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಜಂಕ್ಷಣ್ನಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ನೇಪಾಲ ಮೂಲದ ಲೋಕ್ ಬಹಾದ್ದೂರ್ ಕಡ್ಕ (೪೭) ಎಂದು ಗುರುತಿಸಲಾಗಿದೆ. ಅವರ ಪತ್ನಿ ಮೀನಾ ಕಡ್ಕ ಅವರು ಗಂಭೀರ ಗಾಯಗಳೊಂದಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಿಕ್ಅಪ್ನಲ್ಲಿದ್ದ ಇಬ್ಬರೂ ಗಾಯಗೊಂಡಿದ್ದು ಪಡುಬಿದ್ರಿಯ ಖಾಸಗಿ ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ.
ಟಿಪ್ಪರ್ ಚಾಲಕನು ಬ್ಯಾರಿಕೇಡ್ ಢಿಕ್ಕಿ ಹೊಡೆದು ಸ್ಕೂಟರ್ಗೆ ಢಿಕ್ಕಿ ಹೊಡೆದಿದ್ದು, ಸ್ಕೂಟರ್ ಇದೇ ರಸ್ತೆಯಲ್ಲಿ ಸಂಚರಿಸುತಿದ್ದ ಪಿಕ್ಅಪ್ ಚಕ್ರಕ್ಕೆ ಸಿಲುಕಿ ಗಂಭೀರ ಗಾಯಗೊಂಡಿದ್ದರು. ಬಳಿಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಭಯಾನದ ಅಪಘಾತದ ದೃಶ್ಯ ಪಡುಬಿದ್ರಿ ರಾಷ್ಟ್ರೀಯು ಹೆದ್ದಾರಿಯಲ್ಲಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೊಬೈಲ್ನಲ್ಲಿ ಹರಿದಾಡುತ್ತಿದೆ.
ಲೋಕ್ಬಹಾದ್ದೂರ್ ಕಡ್ಕ ದಂಪತಿ ಮಂಗಳೂರಿಗೆ ಬಂದು ನೆಲೆಸಿ ೧೭ವರ್ಷಗಳಾಗಿದ್ದವು. ಈ ದಂಪತಿ ವಿವಿಧ ಪಿಜಿಗಳಿಗೆ ತಾವೇ ಹೋಗಿ ಅಡುಗೆ ಮಾಡಿ ಕೊಟ್ಟು ಬರುತ್ತಿದ್ದರು. ಉಡುಪಿಯಲ್ಲಿ ಸುತ್ತಾಡಿ ವಿವಿಧ ದೇವಳಗಳನ್ನು ಸಂದರ್ಶಿಸಿ ವಾಪಾಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಪಡುಬಿದ್ರಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿದಿದೆ.