Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾ.26: ಸಮತಾ ಸೈನಿಕ ದಳದಿಂದ ಸಚಿವ ಕೋಟ...

ಮಾ.26: ಸಮತಾ ಸೈನಿಕ ದಳದಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನೆ ಎದುರು ಧರಣಿ

20 March 2023 9:33 PM IST
share
ಮಾ.26: ಸಮತಾ ಸೈನಿಕ ದಳದಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನೆ ಎದುರು ಧರಣಿ

ಉಡುಪಿ, ಮಾ.20: ತಾವು ನೀಡಿದ ಯಾವುದೇ ವಾಗ್ದಾನವನ್ನು ಈಡೇರಿಸಲು ಹಾಗೂ ಮಾಡಿದ ಘೋಷಣೆಯನ್ನು ಕಾರ್ಯರೂಪಕ್ಕೆ ತರಲು ವಿಫಲರಾಗಿರುವ ರಾಜ್ಯ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ವೈಫಲ್ಯತೆಯನ್ನು ಖಂಡಿತ ಸಮತಾ ಸೈನಿಕ ದಳ ಉಡುಪಿ ಜಿಲ್ಲಾ ಸಮಿತಿ ಮಾ.26ರಂದು ಕೋಟದ ಅವರ ಮನೆ ಮುಂದೆ ಬೃಹತ್ ಧರಣಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ ಎಂದು ದಳದ ಜಿಲ್ಲಾಧ್ಯಕ್ಷ ವಿಶ್ವನಾಥ ಪೇತ್ರಿ ಹೇಳಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರಾಗಿ ಅಧಿಕಾರ ಸ್ವೀಕರಿಸಿದ ಒಂದೇ ವಾರದಲ್ಲಿ ಎಸ್‌ಸಿ, ಎಸ್‌ಟಿ ಜನಾಂಗದವರಿಗೆ ‘ಅಂಬೇಡ್ಕರ್ ಆವಾಜ್’ ಮನೆ ನಿರ್ಮಾಣಕ್ಕೆ 7ಲಕ್ಷ ರೂ. ಸಹಾಯಧನ ನೀಡುವುದಾಗಿ ಘೋಷಿಸಿದ್ದು, ಇನ್ನೂ ಅದು ಕಾರ್ಯರೂಪಕ್ಕೆ ಬಾರದಿರುವುದರ ವಿರುದ್ಧ ಈ ಪ್ರತಿಭಟನೆ ನಡೆಯಲಿದೆ ಎಂದವರು ತಿಳಿಸಿದರು.

ಆರ್ಥಿಕವಾಗಿ ಬಡವರಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಶೇ.50ರಷ್ಟು ಮಂದಿ ಈಗಲೂ ಟಾರ್ಪಾಲು, ಮುಳಿಹುಲ್ಲು ಹಾಗೂ ಮುರುಕಲು ಗುಡಿಸಲುಗಳಲ್ಲಿ ವಾಸವಾಗಿದ್ದು, ಸಚಿವರ ಹೇಳಿಕೆಯಂತೆ ಮನೆ ನಿರ್ಮಾಣಕ್ಕಾಗಿ ಗ್ರಾಪಂಗಳಿಗೆ ಅರ್ಜಿ ಸಲ್ಲಿಸಿ ವರ್ಷಗಳಿಂದ ಕಾಯುತಿದ್ದರೂ ಸ್ವಂತ ಮನೆ ಎಂಬುದು ಅವರಿಗೆ ಕನಸಿನ ಮಾತಾಗಿದೆ ಎಂದು ದೂರಿದರು.

ಈಗಿನ ದರದಲ್ಲಿ 600ಚ.ಮೀ. ಮನೆಗೆ ಕನಿಷ್ಠ 9ಲಕ್ಷರೂ. ವೆಚ್ಚವಾಗುತ್ತದೆ.  ಆದರೂ ಸಚಿವರು ಘೋಷಿಸಿದ 7 ಲಕ್ಷ ರೂ.ಗಳ ಸಹಾಯಧನವಿನ್ನೂ ಅನುಷ್ಠಾನಗೊಂಡಿಲ್ಲ. ಹಿಂದಿನ ಸಹಾಯಧನಕ್ಕೆ ಕೇವಲ 25 ಸಾವಿರ ರೂ.ಗಳನ್ನು ಹೆಚ್ಚಿಸಿ ಎರಡು ಲಕ್ಷ ರೂ.ನೀಡಲಾಗುತ್ತದೆ. ಇದರಿಂದ ಮನೆ ಕಟ್ಟಲು ಸಾಧ್ಯವೇ ಇಲ್ಲ ಎಂದು ವಿಶ್ವನಾಥ ಪೇತ್ರಿ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಗೆ ಬರುವ ಎಸ್‌ಟಿಎಸ್‌ಎಫ್ ನಿಧಿಯನ್ನು ವಸತಿ ನಿಗಮಕ್ಕೆ ನೀಡಿ ಬಡವರಿಗೆ ಮನೆಕಟ್ಟಲು 7 ಲಕ್ಷರೂ.ಸಹಾಯಧನ ನೀಡಿ ಎಂದರೆ ಕೇವಲ 25 ಸಾವಿರ ರೂ.ಹೆಚ್ಚಿಸಲಾಗಿದೆ. ಇಲಾಖೆಗೆ ಬಂದ 29,000ಕೋಟಿ ರೂ.ಗಳನ್ನು ವಾರಾಹಿ ಯೋಜನೆಗೆ ವರ್ಗಾಯಿಸಲಾಗಿದೆ. ಅಲ್ಲಿ ಕೊಳವೆ ಬಾವಿ ತೋಡಲು ಎರಡು ಲಕ್ಷ ರೂ. ಬದಲು 8 ಲಕ್ಷ ರೂ.ಗಳನ್ನು ನೀಡಲಾಗುತ್ತದೆ. ಅಲ್ಲದೇ ಸ್ವಉದ್ಯೋಗದ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಬೈಕ್ ಹಾಗೂ ಸ್ಕೂಟರ್‌ಗಳನ್ನು ವಿತರಿಸಲಾಗುತ್ತಿದೆ. ಇದನ್ನೆಲ್ಲಾ ಚುನಾವಣೆಯ ದೃಷ್ಟಿಯಿಂದ ಮಾಡಲಾಗುತ್ತದೆ ಎಂದು ವಿಶ್ವನಾಥ ಪೇತ್ರಿ ಆರೋಪಿಸಿದರು.  

ಈ ಎಲ್ಲಾ ಕಾರಣಗಳಿಂದ ಮಾ.26ರಂದು ಬೆಳಗ್ಗೆ 10ಗಂಟೆಯಿಂದ ಸಚಿವರ ಮನೆ ಮುಂದೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು. ಅಂಬೇಡ್ಕರ್ ಆವಾಜ್ ಮನೆಗೆ 7 ಲಕ್ಷ ರೂ.ಸಹಾಯಧನ ನೀಡುವುದಾಗಿ ಅಧಿಕೃತವಾಗಿ ಘೋಷಿಸಿ, ಅನುಷ್ಠಾನಕ್ಕಾಗಿ ಸಂಬಂಧಪಟ್ಟ ಗ್ರಾಪಂಗಳಿಗೆ ಆದೇಶ ನೀಡುವವರೆಗೂ ಧರಣಿ ಮುಂದುವರಿಯುವುದು ಎಂದವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಮತಾ ಸೈನಿಕ ದಳದ ಪದಾಧಿಕಾರಿಗಳಾದ ವಿಘ್ನೇಶ ಬ್ರಹ್ಮಾವರ, ಶ್ರೀನಿವಾಸ ನಡೂರು, ಸುಬ್ರಹ್ಮಣ್ಯ, ಜ್ಯೋತಿ ಶಿರಿಯಾರ, ಪ್ರಕಾಶ್ ಹೇರೂರು ಉಪಸ್ಥಿತರಿದ್ದರು.

share
Next Story
X