Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಬ್ರಿಟಿಷರ...

ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಬ್ರಿಟಿಷರ ಕಾಲದ ಕಾಯ್ದೆ ಜಾರಿ: ಸಿಐಟಿಯು ನಾಯಕ ಸುರೇಶ್ ಕಲ್ಲಾಗರ

ಕುಂದಾಪುರದಲ್ಲಿ ಕೈಗಾರಿಕಾ ಮುಷ್ಕರ

23 March 2023 7:14 PM IST
share
ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಬ್ರಿಟಿಷರ ಕಾಲದ ಕಾಯ್ದೆ ಜಾರಿ: ಸಿಐಟಿಯು ನಾಯಕ ಸುರೇಶ್ ಕಲ್ಲಾಗರ
ಕುಂದಾಪುರದಲ್ಲಿ ಕೈಗಾರಿಕಾ ಮುಷ್ಕರ

ಕುಂದಾಪುರ, ಮಾ.23: ಸ್ವಾತಂತ್ರ್ಯಕ್ಕೂ ಮುನ್ನ ಬ್ರಿಟಿಷರು ಭಾರತದಲ್ಲಿ ಜಾರಿ ಮಾಡಿದ್ದ ಕಾರ್ಮಿಕ ಹಕ್ಕುಗಳ ಧಮನದ ಲೇಬರ್ ಡಿಸ್ಪ್ಯುಟ್ ಕಾಯ್ದೆಯನ್ನು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಸರಕಾರಗಳು ಜಾರಿಗೊಳಿಸುತ್ತಿವೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಆರೋಪಿಸಿದ್ದಾರೆ.

‘ಕೈಗಾರಿಕಾ ಕಾಯ್ದೆ-2023’ರ ವಿಧೇಯಕ ಹಾಗೂ ಮಹಿಳೆಯರನ್ನು ರಾತ್ರಿ ಪಾಳಿಯಲ್ಲಿ ದುಡಿಸುವ ಕಾಯ್ದೆ ವಿರುದ್ಧ ರಾಜ್ಯವ್ಯಾಪಿ ನಡೆದಿರುವ ಮುಷ್ಕರದ ಅಂಗವಾಗಿ ಕುಂದಾಪುರದ ನಗರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಹೇಳಿದರು.

ಬಿಜೆಪಿ ಆಡಳಿತದ ರಾಜ್ಯ ಸರಕಾರವು 1948 ಕಾರ್ಖಾನೆ ಕಾಯ್ದೆಗೆ ತಿದ್ದುಪಡಿ ಮಾಡಿ ಕೆಲಸದ ಅವಧಿಯನ್ನು 12 ಗಂಟೆಗೆ ಹೆಚ್ಚಳ ಮಾಡಿ ಜಾರಿ ಮಾಡಿರುವುದು, ಬಿಜೆಪಿ ಸರಕಾರ ಕಾರ್ಮಿಕ ವಿರೋಧಿ ಎಂಬುದನ್ನು ಸಾಬೀತು ಪಡೆಸಿದೆ ಎಂದು ಸುರೇಶ್ ಕಲ್ಲಾಗರ ಟೀಕಿಸಿದರು.

ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರು 1929ರಲ್ಲಿ ಬ್ರಿಟಿಷ್ ಪಾರ್ಲಿಮೆಂಟ್‌ನಲ್ಲಿ ಕಾರ್ಮಿಕ ವಿರೋಧಿ ಕಾಯ್ದೆ ಅಂಗೀಕರಿಸಲು ಮುಂದಾದಾಗ ಭಗತ್ ಹಾಗೂ ಬಟುಕೇಶ್ವರ ದತ್ತಾ ಅವರು ಕಾಯ್ದೆ ಜಾರಿಗೊಳ್ಳದಂತೆ ಮಾಡಲು ಹುಸಿ ಬಾಂಬ್ ಸ್ಫೋಟಿಸಿ ವಿರೋಧಿಸಿದರು. ಆದರೆ ದೇಶದ ವಿವಿಧ ರಾಜ್ಯಗಳಲ್ಲಿ ಅಧಿಕಾರ ಮಾಡುತ್ತಿರುವ ಬಿಜೆಪಿ ಪಕ್ಷವು ಬ್ರಿಟಿಷರ ಕಾಯ್ದೆಯನ್ನು ಕಾರ್ಮಿಕರ ಮೇಲೆ ಜಾರಿ ಮಾಡಿ ಶೋಷಣೆಗೆ ಅವಕಾಶ ನೀಡಿದೆ ಎಂದು ಕಲ್ಲಾಗರ ಆಪಾದಿಸಿದರು.

ಸಿಐಟಿಯು ಮುಖಂಡ ಎಚ್. ನರಸಿಂಹ ಮಾತನಾಡಿ, ಕಾರ್ಖಾನೆ ಕಾಯ್ದೆ ತಿದ್ದುಪಡಿಯು ಕಾರ್ಮಿಕರನ್ನು ವಿಶ್ರಾಂತಿ ಇಲ್ಲದೇ ಗುಲಾಮರಂತೆ, ಯಂತ್ರದಂತೆ ದುಡಿಸಿಕೊಳ್ಳಲು ಮಾಲಕರಿಗೆ ಅವಕಾಶ ನೀಡಿದೆ. ಇದು ಸಾಮಾಜಿಕ ಮತ್ತು ಆರ್ಥಿಕವಾಗಿ ಸಮಾಜದ ಮೇಲೆ ದುಷ್ಪರಿಣಾಮ ಬೀರಲಿದ್ದು, ನಿರುದ್ಯೋಗ ಉಲ್ಬಣಗೊಳ್ಳಲಿದೆ ಎಂದು ಎಚ್ಚರಿಸಿದರು.

ಸಿಐಟಿಯು ಸಂಚಾಲಕ ಚಂದ್ರಶೇಖರ ವಿ. ಪ್ರಾಸ್ತಾವಿಕವಾಗಿ ಮಾತನಾಡಿ, ಮಹಿಳೆಯರನ್ನು ರಾತ್ರಿ ಪಾಳಿಯಲ್ಲಿ ದುಡಿಸಿಕೊಳ್ಳುವ ಕಾಯ್ದೆ ಜಾರಿಯಿಂದ ಅವರನ್ನು ಉದ್ಯೋಗದಿಂದ ಹೊರದೂಡಿ ದುರ್ಬಲಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಬೆಲೆ ಏರಿಕೆಯನ್ನು ತಡೆಯಲಾಗದ ಬಿಜೆಪಿ ಸರಕಾರ ಮತ್ತೆ ಅಧಿಕಾರಕ್ಕೇರಲು ಬಂಡವಾಳ ಶಾಹಿಗಳನ್ನು ಸಂತುಷ್ಟಗೊಳಿಸಿ ಆ ಮೂಲಕ ಲಾಭ ಪಡೆಯುವ ಚುನಾವಣಾ ಗಿಮಿಕ್ ಎಂದು ಹೇಳಿದರು.

ಪ್ರತಿಭಟನೆಗೂ ಮುನ್ನ ನೂರಾರು ಕಾರ್ಮಿಕರು ನಗರದ ಬೀದಿಗಳಲ್ಲಿ  ಮೆರವಣಿಗೆ ನಡೆಸಿದರು.
ಪ್ರತಿಭಟನೆಯಲ್ಲಿ ಸಿಐಟಿಯು ಮುಖಂಡರಾದ ಮಹಾಬಲ ವಡೇರ ಹೋಬಳಿ, ಬಲ್ಕೀಸ್, ಪಂಜು ಪೂಜಾರಿ, ಸುರೇಂದ್ರ, ಲಕ್ಷ್ಮಣ, ಗಣಪ, ಚಂದ್ರ ಮೊದಲಾದವರಿದ್ದರು. ಪ್ರಕಾಶ್ ಕೋಣಿ ವಂದಿಸಿದರು.

"ಎಂಟು ಗಂಟೆ ಕೆಲಸ, ಎಂಟು ಗಂಟೆ ವಿಶ್ರಾಂತಿ, ಎಂಟು ಗಂಟೆ ನಿದ್ದೆ ಎಂಬ ವೈಜ್ಞಾನಿಕ ಕಾಯ್ದೆಗೆ, ಬಿಜೆಪಿ ಸರಕಾರ ತಂದ ಕಾರ್ಮಿಕ ವಿರೋಧಿ ಕಾಯ್ದೆ ತಿಲಾಂಜಲಿ ನೀಡಿದೆ".
-ಎಚ್.ನರಸಿಂಹ, ಸಿಐಟಿಯು ಮುಖಂಡ.

share
Next Story
X