ಬ್ರಹ್ಮಾವರ: ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನಾ ಸಭೆ, ಜಾಥಾ
ಬ್ರಹ್ಮಾವರ : ಭದ್ರಗಿರಿಯಿಂದ ಮಾಬುಕಳ ಸೇತುವೆಯವರೆಗೆ ಸರ್ವಿಸ್ ರಸ್ತೆಯನ್ನು ನಿರ್ಮಿಸುವಂತೆ ಹಾಗೂ ಉಪ್ಪಿನಕೋಟೆ ಮತ್ತು ದೂಪದ ಕಟ್ಟೆಯಲ್ಲಿ ಮೀಡಿಯನ್ ಓಪನಿಂಗ್ ನೀಡಲು ಒತ್ತಾಯಿಸಿ ಮಂಗಳವಾರ ರಾಷ್ಟ್ರೀಯ ಹೆದ್ದಾರಿ-66 ಉಳಿಸಿ ಸಮಿತಿಯ ವತಿಯಿಂದ ಪ್ರತಿಭಟನಾ ಸಭೆ, ಹೆದ್ದಾರಿ ತಡೆ ಹಾಗೂ ತಹಶೀಲ್ದಾರರ ಕಚೇರಿವರೆಗೆ ಜಾಥಾ ಹಾಗೂ ಧರಣಿ ನಡೆಯಲಿದೆ.
ಮಂಗಳವಾರ ಬೆಳಗ್ಗೆ 9.30ಕ್ಕೆ ಉಪ್ಪಿನಕೋಟೆಯ ಹೊಟೇಲ್ ಫಾರ್ಚ್ಯೂನ್ ಪಕ್ಕದ ಖಾಸಗಿ ಸ್ಥಳದಲ್ಲಿ ಪ್ರತಿಭಟನಾ ಸಭೆ ನಡೆಯಲಿದ್ದು, ಬಳಿಕ ಕೆಲಹೊತ್ತು ಹೆದ್ದಾರಿ ತಡೆ ನಡೆಸಲಾಗುವುದು. ಬಳಿಕ ಉಪ್ಪಿನಕೋಟೆ ಯಿಂದ ಬ್ರಹ್ಮಾವರದ ತಹಶೀಲ್ದಾರ್ ಕಚೇರಿಯವರೆಗೆ ಜಾಥಾ ನಡೆಯಲಿದ್ದು, ಅಲ್ಲಿ ಧರಣಿ ನಡೆಸಲಾಗುವುದು ಎಂದು ಸಮಿತಿಯ ಸಂಚಾಲಕ ಬಿ.ಗೋವಿಂದರಾಜ್ ಹೆಗ್ಡೆ ತಿಳಿಸಿದ್ದಾರೆ.
Next Story