Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: 'ಶ್ರೀ ಕೃಷ್ಣ ರಸಾಯನಮ್'...

ಉಡುಪಿ: 'ಶ್ರೀ ಕೃಷ್ಣ ರಸಾಯನಮ್' ತಾಳಮದ್ದಳೆ ಸಮಾರೋಪ ಸಮಾರಂಭ

28 March 2023 9:39 AM IST
share
ಉಡುಪಿ: ಶ್ರೀ ಕೃಷ್ಣ ರಸಾಯನಮ್ ತಾಳಮದ್ದಳೆ ಸಮಾರೋಪ ಸಮಾರಂಭ

ಉಡುಪಿ: ಉಜಿರೆ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನದ ರಜತಪರ್ವದ ಹಾಗೂ ಗುರಿಕಾರ ನೆಡ್ಳೆ ನರಸಿಂಹ ಭಟ್ಟರ 'ಸಂಸ್ಮೃತಿ' ಸಪ್ತಾಹ ಪ್ರಯುಕ್ತ ಹಮ್ಮಿಕೊಂಡಿದ್ದ 'ಶ್ರೀ ಕೃಷ್ಣ ರಸಾಯನಮ್' ತಾಳಮದ್ದಳೆ ಸರಣಿಯು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ರವಿವಾರ ಸಮಾರೋಪಗೊಂಡಿತು.

ಸಮಾರಂಭದಲ್ಲಿ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಕಲಾವಿದರನ್ನು ಆಶೀರ್ವದಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಜೈಮಿನಿ ಭಾರತದ ಕಥಾವಸ್ತು, 'ಸುಧನ್ವ ಮೋಕ್ಷ ' ಆಖ್ಯಾನವಾದ 'ಕೃಷ್ಣ ದರ್ಶನ' ಪ್ರಸಂಗದ ತಾಳಮದ್ದಳೆ ಪ್ರಸ್ತುತಗೊಂಡಿತು.

ಭಾಗವತರಾಗಿ ಪುತ್ತಿಗೆ ರಘುರಾಮ ಹೊಳ್ಳ, ಮದ್ದಳೆವಾದನದಲ್ಲಿ ಕೃಷ್ಣಪ್ರಕಾಶ ಉಳಿತ್ತಾಯ ಹಾಗೂ ಚೆಂಡೆವಾದಕರಾಗಿ ಕಲ್ಮಡ್ಕ ಶಂಕರ ಭಟ್ ಹಿಮ್ಮೇಳದಲ್ಲಿ ಭಾಗವಹಿಸಿದರು.

ಸುಧನ್ವನ ಪಾತ್ರದಲ್ಲಿ ವಿದ್ವಾನ್ ಉಮಾಕಾಂತ ಭಟ್ ಕೆರೆಕೈ, ಅರ್ಜುನನಾಗಿ ಉಜಿರೆ ಅಶೋಕ ಭಟ್ ಹಾಗೂ ಕೃಷ್ಣನಾಗಿ ಸುಜಯೀಂದ್ರ ಹಂದೆ ಅರ್ಥ ಹೇಳಿದರು.

ಈ ತಾಳಮದ್ದಳೆ ಸಪ್ತಾಹಕ್ಕೆ ನೆಡ್ಳೆ ನರಸಿಂಹ ಭಟ್ಟ ಯಕ್ಷಗಾನ ಪ್ರತಿಷ್ಠಾನ, ಯೆಯ್ಯಾಡಿ ಇದರ ಮುಖ್ಯಸ್ಥ ಹಾಗೂ 'ನರನ್ಸ್'  ಫುಡ್ ಪ್ರಾಡಕ್ಸ್ಟ್ ಆಡಳಿತ ನಿರ್ದೇಶಕ ನೆಡ್ಳೆ ರಾಮ ಭಟ್ ಪ್ರಾಯೋಜಕತ್ವ ನೀಡಿದರು.

ಶ್ರೀ ಮಠದ ಮ್ಯಾನೇಜರ್ ಗೋಪಾಲಕೃಷ್ಣ ಉಪಾಧ್ಯಾಯ ಸ್ವಾಗತಿಸಿದರು. ಕುರಿಯ ಪ್ರತಿಷ್ಠಾನದ ಸಂಚಾಲಕ ಉಜಿರೆ ಅಶೋಕ ಭಟ್ ವಂದಿಸಿದರು.

'ಸುದರ್ಶನಗ್ರಹಣ' ಪ್ರಸಂಗದ ತಾಳಮದ್ದಳೆ

'ಶ್ರೀ ಕೃಷ್ಣ ರಸಾಯನಮ್' ಸರಣಿಯ ಆರನೆಯ ದಿನವಾದ ಶನಿವಾರ 'ಸುದರ್ಶನಗ್ರಹಣ' ಪ್ರಸಂಗದ ತಾಳಮದ್ದಳೆ ಪ್ರದರ್ಶನಗೊಂಡಿತು.

ಮಹಾಭಾರತದ 'ಭೀಷ್ಮ ಪರ್ವ'ದಲ್ಲಿ ನಿರೂಪಿತವಾಗಿರುವ ಕಥೆಯನ್ನು ಆಧರಿಸಿರುವ "ಸುದರ್ಶನಗ್ರಹಣ" ಪ್ರಸಂಗದ ತಾಳಮದ್ದಳೆಯಲ್ಲಿ ಭಾಗವತರಾಗಿ ರವಿಚಂದ್ರ ಕನ್ನಡಿಕಟ್ಟೆ, ಮದ್ದಳೆವಾದನದಲ್ಲಿ ಕೃಷ್ಣಪ್ರಕಾಶ ಉಳಿತ್ತಾಯ ಹಾಗೂ ಚೆಂಡೆವಾದಕರಾಗಿ ಯೋಗೀಶ ಉಳೆಪಾಡಿ ಭಾಗವಹಿಸಿದರು.

ಕೃಷ್ಣನ ಪಾತ್ರದಲ್ಲಿ ವಿದ್ವಾನ್ ಉಮಾಕಾಂತ ಭಟ್ ಕೆರೇಕೈ, ಭೀಷ್ಮನಾಗಿ ಉಜಿರೆ ಅಶೋಕ ಭಟ್ ಹಾಗೂ ಅರ್ಜುನನಾಗಿ ಸತೀಶ ಶೆಟ್ಟಿ ಮೂಡುಬಗೆ ಅರ್ಥ ಹೇಳಿದರು.

ಶ್ರೀ ಮಠದ ಮ್ಯಾನೇಜರ್ ಗೋಪಾಲಕೃಷ್ಣ ಉಪಾಧ್ಯಾಯ ಸ್ವಾಗತಿಸಿದರು. ಉಜಿರೆಯ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಚಾಲಕ  ಉಜಿರೆ ಅಶೋಕ ಭಟ್ ವಂದಿಸಿದರು.

ಹುಬ್ಬಳ್ಳಿಯಲ್ಲಿ ಉದ್ಯಮಿಗಳಾಗಿರುವ 'ಡಯಾನ ಪೈಂಟ್ಸ್'ನ ಆಡಳಿತ ನಿರ್ದೇಶಕ, ಕಲಾಪೋಷಕರೂ ಆದ ಆರ್.ಜಿ. ಭಟ್ ವರ್ಗಾಸರ ಶಿರಸಿ ಆರ್ಥಿಕ ಪ್ರಾಯೋಜಕತ್ವ ನೀಡಿದರು.

share
Next Story
X