Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಮಾಜದಲ್ಲಿನ ಸವಾಲುಗಳನ್ನು...

ಸಮಾಜದಲ್ಲಿನ ಸವಾಲುಗಳನ್ನು ಸಾಕ್ಷಿಪ್ರಜ್ಞೆಯಾಗಿ ಮಂಡಿಸುವುದು ಅಗತ್ಯ: ವೆಂಕಟರಮಣ ಐತಾಳ್

28 March 2023 8:01 PM IST
share
ಸಮಾಜದಲ್ಲಿನ ಸವಾಲುಗಳನ್ನು ಸಾಕ್ಷಿಪ್ರಜ್ಞೆಯಾಗಿ ಮಂಡಿಸುವುದು ಅಗತ್ಯ: ವೆಂಕಟರಮಣ ಐತಾಳ್

ಉಡುಪಿ: ಸಮಾಜದಲ್ಲಿ ನಡೆಯುತ್ತಿರುವ ಬಿಕ್ಕಟ್ಟು, ಸವಾಲು ಹಾಗೂ ಸಂಕಟಗಳನ್ನು ಎದುರಿಸುವ ಬಗ್ಗೆ ರಂಗ ಕಲಾವಿದರು ಜನರಿಗೆ ಹೇಳುವ ಕಾರ್ಯ ಮಾಡಬೇಕು. ಕಲಾವಿದರು, ಸಾಹಿತಿಗಳು ಸಾಕ್ಷಿಪ್ರಜ್ಞೆಯಾಗಿ ಇದನ್ನು ಸಮಾಜದ ಮುಂದೆ ಮಂಡಿಸಬೇಕು. ಈ ಮೂಲಕ ಕಲಾವಿದರು ಬೆಳೆಯುವುದ ರೊಂದಿಗೆ ಸಮಾಜಕ್ಕೆ ಅರಿವು ಕೊಡಬೇಕೆಂದು ರಂಗ ನಿರ್ದೇಶಕ ಬಿ.ಆರ್. ವೆಂಕಟರಮಣ ಐತಾಳ್ ಹೇಳಿದ್ದಾರೆ.

ಸಾಂಸ್ಕೃತಿಕ ಸಂಘಟನೆ ರಥಬೀದಿ ಗೆಳೆಯರು ಉಡುಪಿ ಆಶ್ರಯದಲ್ಲಿ ವಿಶ್ವ ರಂಗಭೂಮಿ ದಿನದ ಅಂಗವಾಗಿ ಉಡುಪಿ ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಭವನದಲ್ಲಿ ಮಂಗಳವಾರ ನಡೆದ ರಂಗ ನಿರ್ದೇಶಕರೊಂದಿಗೆ ರಂಗ ಬದ್ಧತೆ ಮತ್ತು ಹವ್ಯಾಸಿ ರಂಗಭೂಮಿ ವರ್ತಮಾನದ ತಲ್ಲಣಗಳ ಕುರಿತ ರಥಬೀದಿ ರಂಗ ಮಾತುಕತೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಆಶಯ ಮತ್ತು ಆಕೃತಿಗೆ ಇರುವ ಸಂಬಂಧ ಅತಿಮುಖ್ಯ. ಅದು ರಂಗಭೂಮಿ ಯಲ್ಲಿ ಇದ್ದಾಗ ಮಾತ್ರ ಕಲೆ ಆಗುತ್ತದೆ. ರೂಪ ಬದ್ಧತೆ ಮತ್ತು ವಿಷಯ ಬದ್ಧತೆಯ ಬೆಸುಗೆಯಿಂದ ಕಲೆ ಹುಟ್ಟುತ್ತದೆ. ಆ ಕಲೆ ಮಾತ್ರ ನಿಜವಾದ, ಅರ್ಥಪೂರ್ಣ ಮತ್ತು ಜವಾಬ್ದಾರಿಯುತ ರಂಗಭೂಮಿ ಆಗುತ್ತದೆ. ತಾನು ಬದುಕುತ್ತಿರುವ ಸಮುದಾಯ, ಸಮಾಜ, ಜಗತ್ತಿನ ಸುಖದುಃಖ, ಸಂಕಟ, ಬಿಕ್ಕಟ್ಟುಗಳ ಬಗ್ಗೆ ಹಂಚಿಕೊಳ್ಳುವುದು ಕಲಾವಿದನ ಕೆಲಸ. ಅದು ರಂಗಭೂಮಿ ಯಲ್ಲಿ ತೀವ್ರವಾಗಿ ರುತ್ತದೆ ಎಂದರು.

ನೇರವಾಗಿ, ಜೀವಂತವಾಗಿ, ಸಮುದಾಯಿಕವಾಗಿ ಕೆಲಸ ಮಾಡುವ ಕಲೆ ರಂಗಭೂಮಿ. ಆದುದರಿಂದ ಬೇರೆ ಎಲ್ಲ ಕಲೆಗಳಿಗಿಂತ ರಂಗಭೂಮಿಗೆ ಹೆಚ್ಚು ಜವಾಬ್ದಾರಿ ಇರುತ್ತದೆ. ಆ ಜವಾಬ್ದಾರಿ ನಿಬಾಯಿಸಲು ಸಾಧ್ಯವೇ ಎಂಬುದರ ಬಗ್ಗೆ ನಾವು ಚಿಂತನೆ ಮಾಡಬೇಕಾಗಿದೆ ಎಂದು ಅವರು ತಿಳಿಸಿದರು.

ರಂಗ ನಿರ್ದೇಶಕ ಐ.ಕೆ.ಬೋಳುವಾರ್ ಮಾತನಾಡಿ, ನಾಟಕವು ಸಮಕಾಲೀನ ರಾಜಕೀಯ ಚಿಂತನೆಗಳನ್ನು ರೂಪಿಸುವ ಹಾಗೂ ಚರ್ಚಿಸುವ ಶಕ್ತಿಯನ್ನು ಹೊಂದಿದೆ. ಐವತ್ತು ವರ್ಷದಷ್ಟು ದೂರಗಾಮಿ ಚಿಂತನೆಯನ್ನು ರಂಗಭೂಮಿ ಕಟ್ಟಿಕೊಡುತ್ತದೆ. ಪ್ರೇಕ್ಷಕರಲ್ಲಿ, ನೋಡುಗರಲ್ಲಿ ಯೋಚನಾ ಲಹರಿ, ಚಿಂತನೆಯನ್ನು ರಂಗಭೂಮಿ ಹುಟ್ಟುಹಾಕುತ್ತದೆ ಎಂದು ಹೇಳಿದರು.

ರಥಬೀದಿ ಗೆಳೆಯರು ಅಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ಸ್ವಾಗತಿಸಿ ದರು. ನಾಟಕ ವಿಭಾಗದ ಸಂಚಾಲಕ ಸಂತೋಷ್ ಶೆಟ್ಟಿ ಹಿರಿಯಡ್ಕ ರಂಗಭೂಮಿ ಸಂದೇಶವನ್ನು ವಾಚಿಸಿದರು. ಕಾರ್ಯದರ್ಶಿ ಸುಬ್ರಹ್ಮಣ್ಯ ಜೋಶಿ ವಂದಿಸಿದರು. ಸಂತೋಷ್ ನಾಯಕ್ ಪಟ್ಲ ಕಾರ್ಯಕ್ರಮ ನಿರೂಪಿಸಿದರು.

share
Next Story
X