Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಒರಿಸ್ಸಾದ ಸಾಂಪ್ರದಾಯಿಕ ಕಲೆ ‘ಪಟಚಿತ್ರ’...

ಒರಿಸ್ಸಾದ ಸಾಂಪ್ರದಾಯಿಕ ಕಲೆ ‘ಪಟಚಿತ್ರ’ ಉಡುಪಿಗೆ ಪರಿಚಯಿಸುವ ಪ್ರಯತ್ನ

31 March 2023 5:18 PM IST
share
ಒರಿಸ್ಸಾದ ಸಾಂಪ್ರದಾಯಿಕ ಕಲೆ ‘ಪಟಚಿತ್ರ’ ಉಡುಪಿಗೆ ಪರಿಚಯಿಸುವ ಪ್ರಯತ್ನ

ಉಡುಪಿ, ಮಾ.31: ಭಾವನಾ ಫೌಂಡೇಶನ್, ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಆಯೋಜಿಸುವ ಜನಪದ ದೇಶೀಯ ಕಲೆಗಳ  ಸರಣಿ ಕಾರ್ಯಾಗಾರದಲ್ಲಿ ಒರಿಸ್ಸಾ ರಾಜ್ಯದಲ್ಲಿ ಬಳಕೆಯಲ್ಲಿರುವ ಭಾರತೀಯ ವಿಶಿಷ್ಟ ಸಾಂಪ್ರದಾಯಿಕ ಕಲೆ ‘ಪಟಚಿತ್ರ’ವನ್ನು ಉಡುಪಿಗೆ ಪರಿಚಯಿಸುವುದರ ಮೂಲಕ ಕಲಾಸಕ್ತರು ಅದರ ರಚನೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡ ಲಾಗುತ್ತಿದೆ.

ಬಡಗುಪೇಟೆಯ ಭಾಸ ಗ್ಯಾಲರಿಯಲ್ಲಿ ಹಮ್ಮಿಕೊಂಡಿರುವ ಬಟ್ಟೆ, ಪೇಪರ್ ಮೊದಲಾದವುಗಳಲ್ಲಿ ರಚಿಸಲ್ಪಡುವ ಪಟಚಿತ್ರ ಹಾಗೂ ತಾಳೆಯೋಲೆಯ ಮೇಲೆ  ತಾಳ ಪಟಚಿತ್ರ ಕಾರ್ಯಾಗಾರವನ್ನು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕಲಾವಿದೆ ಒರಿಸ್ಸಾದ ಗೀತಾಂಜಲಿ ದಾಸ್ ನಡೆಸಿಕೊಡುತ್ತಿದ್ದಾರೆ. ಇವರು ಪಟಚಿತ್ರಗಳ ಪಾರಂಪರಿಕ ರಚನಾ ಕ್ರಮ, ತಾಂತ್ರಿಕತೆಗಳನ್ನು ಆಸಕ್ತರಿಗೆ ಕಲಿಸಿ ಕೊಡುತ್ತಿದ್ದಾರೆ.

ಒರಿಸ್ಸಾದ ಪುರಿಯ ಬಳಿಯ ದಂಡಸಾಹಿಯ ಕಲಾವಿದೆ ಗೀತಾಂಜಲಿ ದಾಸ್, ಪಟಚಿತ್ರ ಕಲಾವಿದ ದಿವಂಗತ ಪ್ರಣಬ್ ನಾರಾಯಣ್ ದಾಸ್ ಅವರ ಪತ್ನಿ. ಇವರು ಪಟಚಿತ್ರ ಕಲಾಪ್ರಕಾರಕ್ಕಾಗಿ ಪದ್ಮಶ್ರೀ ಪ್ರಶಸ್ತಿ ಪಡೆದ ತನ್ನ ಅಜ್ಜ ಬ್ರಜ್ ಕಿಶೋರ್ ಪ್ರದಾನ್ ಅವರಿಂದ ಈ ಕಲೆಯನ್ನು ತಮ್ಮ 10ನೇ ವಯಸ್ಸಿನಲ್ಲಿ ಕಲಿತುಕೊಂಡರು.

‘ಈ ಕಲೆಯನ್ನು ನೈಸರ್ಗಿಕವಾಗಿ ಸಿಗುವ ಬಣ್ಣಗಳನ್ನು ಬಳಸಿ ರೇಷ್ಮೆ, ಹತ್ತಿಯ ಬಟ್ಟೆ ಹಾಗೂ ಕಾಗದ ಮೇಲೆ ರಚಿಸಲಾಗುತ್ತದೆ. ರಾಮಯಣ ಸೇರಿದಂತೆ ಪೌರಾಣಿಕ ನಿರೂಪಣೆಗಳು, ಜಾನಪದೀಯ ಕಥೆಗಳು ಹಾಗೂ ಪರಿಸರ ಚಿತ್ರಗಳು ಈ ಕಲಾಪ್ರಕಾರದಲ್ಲಿ ಅಭಿವ್ಯಕ್ತಗೊಲಿಸಲಾಗುತ್ತದೆ. ಈ ಕಲೆಗೆ ದೇಶ ವಿದೇಶಗಳಲ್ಲೂ ಬಹಳಷ್ಟು ಬೇಡಿಕೆ ಇದೆ’ ಎಂದು ಗೀತಾಂಜಲಿ ದಾಸ್ ತಿಳಿಸಿದರು.

ಇದೊಂದು ಸಾಕಷ್ಟು ವಿವರಣಾತ್ಮಕವಾದ ಮತ್ತು ಸಂಕೀರ್ಣತೆಯಿಂದ ಕೂಡಿದ ಕಲಾಪ್ರಕಾರವಾಗಿದ್ದು, ಕೆಲ ವೊಂದು ಚಿತ್ರ ರಚನೆಗೆ ಎರಡು ತಿಂಗಳ  ಕಾಲಾವಕಾಶ ಬೇಕಾಗುತ್ತದೆ. ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ ಈ ಕಲಾ ಪ್ರಕಾರಗಳನ್ನು ಬಳಸಲಾಗುತ್ತದೆ. ನಾನು ದೆಹಲಿ ಸೇರಿದಂತೆ ದೇಶದ ನಾನಾ ಕಡೆಗಳಲ್ಲಿ ಈ ಪಟಚಿತ್ರ ಕಲಾಕೃತಿಗಳನ್ನು ಪ್ರದರ್ಶಿಸಿದ್ದೇನೆ’ ಎಂದು ಅವರು ಹೇಳಿದರು.

ಕಾರ್ಯಾಗಾರವನ್ನು ವೆಂಟನಾ ಫೌಂಡೇಶನ್‌ನ ಟ್ರಸ್ಟಿ ರವೀಂದ್ರ ಕೆ. ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಣಿಪಾಲ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಾಫಿಕಲ್ ಆರ್ಟ್ಸ್ ಮತ್ತು ಸೈನ್ಸ್‌ನ ಮುಖ್ಯಸ್ಥ ಪ್ರೊ. ವರದೇಶ ಹಿರೇಗಂಗೆ, ಇಂಟ್ಯಾಕ್ ಮಂಗಳೂರು ವಿಭಾಗದ ಸಂಚಾಲಕ ಆರ್ಕಿಟೆಕ್ಟ್ ಸುಭಾಶ್‌ಚಂದ್ರ ಬಸು, ಭಾವನಾ ಫೌಂಡೇಶನ್‌ನ ನಿರ್ದೇಶಕ ಯಕ್ಷಗುರು ಹಾವಂಜೆ ಮಂಜುನಾಥಯ್ಯ ಉಪಸ್ಥಿತರಿದ್ದರು. ಕಾರ್ಯಾ ಗಾರದ ಸಂಯೋಜಕ ಜನಾರ್ದನ ಹಾವಂಜೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಇಂದು ಮತ್ತು ನಾಳೆ ಪಟಚಿತ್ರ ಮತ್ತು ಎ.2ರಂದು ತಾಳೆ ಪಟಚಿತ್ರ ಕಾರ್ಯಾಗಾರ ನಡೆಯಲಿದ್ದು, ಪ್ರತಿನಿತ್ಯ ಸಂಜೆ 4ರಿಂದ 7ರ ತನಕ ಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ.

share
Next Story
X